Webdunia - Bharat's app for daily news and videos

Install App

ಶೃತಿ- ಸರ್ಜಾ ಮೀಟೂ ಆರೋಪ; ಅರ್ಜುನ್‌ ಸರ್ಜಾ ಬಗ್ಗೆ ಹಿರಿಯ ನಟಿ ಜಯಮಾಲಾ ಹೇಳಿದ್ದೇನು?

Webdunia
ಶುಕ್ರವಾರ, 26 ಅಕ್ಟೋಬರ್ 2018 (07:33 IST)
ಉಡುಪಿ : ಸ್ಯಾಂಡಲ್ ವುಡ್ ನಲ್ಲಿ ಮೀಟೂ ಆರೋಪ ಬಾರೀ ಸದ್ದು ಮಾಡುತ್ತಿದ್ದು ಇದೀಗ ಹಿರಿಯ ನಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.


ಉಡುಪಿ ಜಿಲ್ಲೆ ಬೈಂದೂರು ಸಮೀಪದ ನಾಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣಿಗಾಗುವ ಚಿತ್ರಹಿಂಸೆ, ದೌರ್ಜನ್ಯಗಳ ವಿರುದ್ಧ ದನಿಯೆತ್ತಲು ಅಭಿಯಾನ ಬಲ ತಂದುಕೊಟ್ಟಿದೆ. ಹೀಗಾಗಿ ದೌರ್ಜನ್ಯಕ್ಕೊಳಗಾದ ಹೆಣ್ಣು ಮುಕ್ತವಾಗಿ ಹೇಳಲು ಮುಂದೆ ಬಂದಾಗ ಆಕೆಗೆ ಬೆಂಬಲ ನೀಡಬೇಕು. ಆದರೆ ಹೆಣ್ಣಿಗೆ ರಕ್ಷಣೆ ಕೊಡುವ ನೆಪದಲ್ಲಿ ಗಂಡನ್ನು ದೂಷಿಸುವುದು ತಪ್ಪು ಎಂದು ತಿಳಿಸಿದ್ದಾರೆ.


ಮೀ ಟೂ’ ಎಂಬ ಹೊಸ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟರ ಮಟ್ಟಿಗೆ ನ್ಯಾಯ ಸಿಗುತ್ತದೆ ಎಂಬುದು ಬಹಳ ಮುಖ್ಯ. ಹೀಗಾಗಿ ಈ ಅಭಿಯಾನ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ.  ರಾಜಕೀಯದಲ್ಲಿ ಸಕ್ರಿಯವಾಗಿದ್ದರಿಂದ ಈಗಿನ ಚಿತ್ರರಂಗದ ಬಗ್ಗೆ ನನಗೆ ಅಷ್ಟೊಂದು ಗೊತ್ತಿಲ್ಲ. ನಾನು ನೋಡಿದಂತೆ ನಟ ಅರ್ಜುನ್‌ ಸರ್ಜಾ ಸರಳ, ಸಜ್ಜನ ಹುಡುಗ. ಅರ್ಜುನ್‌ ಸರ್ಜಾ ತಂದೆಯ ಜೊತೆಯೂ ನಾನು ಅಭಿನಯಿಸಿದ್ದೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments