Webdunia - Bharat's app for daily news and videos

Install App

Vijay Prakash: ಲವ ಲವಿಕೆಯಿಂದಿದ್ದ ಗಾಯಕ ವಿಜಯ್ ಪ್ರಕಾಶ್ ಗೆ ಇದ್ದಕ್ಕಿದ್ದಂತೆ ಏನಾಯ್ತು, ಫೋಟೋ ನೋಡಿ

Krishnaveni K
ಗುರುವಾರ, 3 ಏಪ್ರಿಲ್ 2025 (12:58 IST)
ಬೆಂಗಳೂರು: ಕನ್ನಡದ ಹೆಮ್ಮೆಯ ಬಹುಭಾಷಾ ಗಾಯಕ ವಿಜಯ್ ಪ್ರಕಾಶ್ ಎಲ್ಲೇ ಹೋದ್ರೂ ಚಿನಕುರುಳಿಯಂತಿರುತ್ತಾರೆ. ಆದರೆ ಅವರಿಗೆ ಇದ್ದಕ್ಕಿದ್ದಂತೆ ಏನಾಯ್ತು? ಇಲ್ಲಿ ನೋಡಿ.

ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಲವು ಸೂಪರ್ ಹಿಟ್ ಹಾಡುಗಳನ್ನು ಕೊಟ್ಟವರು. ಕನ್ನಡದ ಹೆಮ್ಮೆಯ ಗಾಯಕನಿಗೆ ಈಗ ಹುಷಾರಿಲ್ಲ. ಅಂತಹದ್ದೇನಾಗಿದೆ ಎಂಬ ಆತಂಕಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ.

ವಿಜಯ್ ಪ್ರಕಾಶ್ ನಿನ್ನೆ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಓಪನಿಂಗ್ ಮ್ಯಾಚ್ ಗೆ ಮುನ್ನ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು, ಸದ್ಯಕ್ಕೆ ಪ್ಲಾಸ್ಟರ್ ಹಾಕಲಾಗಿದೆ. ಇದೀಗ ಅವರಿಗೆ ಎದ್ದು ಓಡಾಡಲು ಕಷ್ಟಪಡುವ ಸ್ಥಿತಿಯಾಗಿದೆ. ಇದನ್ನು ಅವರೇ ಫೋಟೋ ಸಮೇತ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.


ನಿನ್ನೆ ಕಾರ್ಯಕ್ರಮ ಮುಗಿದ ಬಳಿಕ ಕಾಲು ಉಳುಕಿದೆ. ಇದರಿಂದಾಗಿ ನನ್ನ ಪರಿಸ್ಥಿತಿ ಈಗ ಹೀಗಾಗಿದೆ ಎಂದು ಫೋಟೋ ಪ್ರಕಟಿಸಿದ್ದಾರೆ. ಅವರ ಸ್ಥಿತಿ ನೋಡಿ ಅಭಿಮಾನಿಗಳು ಯಾರ ದೃಷ್ಟಿಯಾಯ್ತೋ, ಬೇಗ ಹುಷಾರಾಗಿ ಎಂದು ಹಾರೈಸಿದ್ದಾರೆ.

 
 
 
 
 
 
 
 
 
 
 
 
 
 
 

A post shared by Vijay Prakash (@vijayprakashvp)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments