Webdunia - Bharat's app for daily news and videos

Install App

ಅಪಘಾತದಲ್ಲಿ ಕಿರಣ್‌ಗೆ ಏನಾಯ್ತು, ಆಸ್ಪತ್ರೆಯಿಂದಲೇ ಕೊಟ್ಟ ಅಪ್‌ಡೇಟ್‌ ಏನು

Sampriya
ಬುಧವಾರ, 11 ಸೆಪ್ಟಂಬರ್ 2024 (14:16 IST)
Photo Courtesy X
ಬೆಂಗಳೂರು: ನಟ ಕಿರಣ್​ ರಾಜ್​ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ತಡರಾತ್ರಿ 9 ಗಂಟೆ ಸುಮಾರಿಗೆ ಅಪಘಾತಕ್ಕೆ ಒಳಗಾಗಿದೆ. ಅದರಲ್ಲಿದ್ದ ಕಿರಣ್​ ರಾಜ್​ ಅವರ ಎದೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟನ ಆರೋಗ್ಯದ ಕುರಿತು ಆಸ್ಪತ್ರೆಯಿಂದ ಅಪ್‌ಡೇಟ್‌ ಬಂದಿದೆ. ಕಿರಣ್ ರಾಜ್ ಅವರ ವಿಡಿಯೋ ರಿಲೀಸ್‌ ಆಗಿದೆ. ಈ ವಿಡಿಯೋದಲ್ಲಿ ನಟ ಕಿರಣ್​ ನಥಿಂಗ್ ಟು ವರಿ. ಸ್ವಲ್ಪ ಪೆಟ್ಟಾಗಿದೆ. ಡಾಕ್ಟರ್ ಟ್ರೀಟ್ಮೆಂಟ್ ಕೊಡ್ತಿದ್ದಾರೆ. ದಯವಿಟ್ಟು ಯಾರು ಪ್ಯಾನಿಕ್ ಆಗ್ಬೇಡಿ. ನಾನು ಆರಾಮ ಆಗಿ ಇದ್ದೇನೆ. ಥ್ಯಾಂಕ್ ಯೂ ಆಲ್ ಅಂತ ಹೇಳಿದ್ದಾರೆ.  

ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್​​​ ರಾಜ್ ಅವರ ಸಿನಿಮಾ ರಿಲೀಸ್​ ಆಗುತ್ತಿದೆ.​​​ ನಾಳೆ ರಾಜ್ಯಾದ್ಯಂತ ಬಹುನೀರಿಕ್ಷಿತ ಸಿನಿಮಾ ರಾನಿ ರಿಲೀಸ್​ ಆಗುತ್ತಿದೆ. ಆದರೆ, ಇದರ ಮಧ್ಯೆ ನಟ ಕಿರಣ್ ರಾಜ್​ ಕಾರಿಗೆ ಅಪಘಾತವಾಗಿದೆ.  ಕಿರಣ್​ ರಾಜ್​ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ಸೇಫ್ ಆಗಿದ್ದಾರೆ.

ಈಗಾಗಲೇ ನಟ ಕಿರಣ್​ ರಾಜ್ ಅವರು ಅಸತೋಮ ಸದ್ಗಮಯ, ಬಡ್ಡೀಸ್, ಭರ್ಜರಿ ಗಂಡು, ಮಾರ್ಚ್​ 22 ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಗ್ಯಾಂಗ್​ಸ್ಟರ್​ ಕಥೆಯಲ್ಲಿ ಡಾನ್​ ಪಾತ್ರದಲ್ಲಿ ನಟಿಸಿರುವ ಕಿರಣ್ ರಾಜ್ ಜಬರ್​ದಸ್ತ್ ಆ್ಯಕ್ಷನ್ ಮೂಲಕ ಗಮನ ಸೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಮುಂದಿನ ಸುದ್ದಿ
Show comments