Select Your Language

Notifications

webdunia
webdunia
webdunia
webdunia

ಪೂಜೆಯಲ್ಲಿ ದರ್ಶನ್‌ಗಾಗಿ ಬೇಡಿಕೊಂಡರೆ ತಪ್ಪೇನು: ಗಿರಿಜಾ ಲೋಕೇಶ್

Darshan Girija Lokesh

Sampriya

ಬೆಂಗಳೂರು , ಬುಧವಾರ, 14 ಆಗಸ್ಟ್ 2024 (17:18 IST)
Photo Courtesy X
ಬೆಂಗಳೂರು: ದಿನದಿಂದ ದಿನಕ್ಕೆ ಕನ್ನಡ ಚಿತ್ರರಂಗ ಪಾತಳಕ್ಕೆ ಹೋಗುತ್ತಿದ್ದು, ಸಂಕಷ್ಟದಿಂದ ಪಾರು ಮಾಡುವಂತೆ ಇಂದು ನಿರ್ಮಾಪಕ ರಾಕ್‌ಲೈನ್ ನೇತೃತ್ವದಲ್ಲಿ ಕಲಾವಿದರ ಸಂಘದ ಕಟ್ಟಡದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲಾಯಿತು.

ಇನ್ನೂ ಈ ಪೂಜೆಯನ್ನು ದರ್ಶನ್‌ಗೋಸ್ಕರ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿತ್ತು. ಈ ಸಂಬಂಧ ಪೂಜೆಯಲ್ಲಿ ಭಾಗಿಯಾದ ಹಿರಿಯ ನಟಿ ಗಿರೀಜಾ ಲೊಕೇಶ್ ಅವರು ಪ್ರತಿಕ್ರಿಯಿಸಿ, ದರ್ಶನ್ ಅವರು ನಮ್ಮ ಚಿತ್ರರಂಗದ ಒಬ್ಬ ನಟರು. ಅವರಿಗೂ ಈ ಪೂಜೆಯಲ್ಲಿ ಬೇಡಿಕೊಂಡರೆ ತಪ್ಪೇನು. ಅವರು ಕನ್ನಡ ಸಿನಿಮಾ ರಂಗದ ಬೆಳವಣಿಗೆ ತುಂಬಾನೇ ಮುಖ್ಯ ಪಾತ್ರರಾಗಿದ್ದಾರೆ. ಅವರಿಗೆ ಬೇಡಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿದ್ದ, ಸಿನಿಮಾ ನಿರ್ಮಾಪಕರು ಸಂಕಷ್ಟದಲ್ಲಿದ್ದಾರೆ. ಹತ್ತಾರು ಸಿನಿಮಾಗಳು ತೆರೆಕಂಡರೂ ಸಹ ಚಿತ್ರತಂಡ ಸಹ ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ. ಸಿನಿಮಾ ಯಶಸ್ವಿ ಆದರೆ ಅಷ್ಟೇ ನಿರ್ಮಾಪಕರು ಸಿನಿಮಾ ಮಾಡಲು ಮುಂದಾಗುತ್ತಾರೆ.  ಈ ಹಿನ್ನೆಲೆಯಲ್ಲಿ ಚಿತ್ರರಂಗವನ್ನು ಕಾಪಾಡುವಂತೆ ಕಲಾವಿದರ ಸಂಘ ದೇವರ ಮೊರೆ ಹೋಗಿದೆ.

ಬೆಳಗ್ಗೆಯಿಂದ ನಡೆ ಪೂಜಾ ಕಾರ್ಯದಲ್ಲಿ 8 ಜನರ ವಿಶೇಷ ಪುರೋಹಿತರ ತಂಡದಿಂದ ಈ ಪೂಜೆ ನಡೆಯುತ್ತಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹಾಗೂ ಅವರ ಪತ್ನಿ ಪೂಜೆ ನಡೆಸಿಕೊಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ: ಇನ್ನೆಷ್ಟು ದಿನ ಜೈಲು ವಾಸ ಇಲ್ಲಿದೆ ವಿವರ