Webdunia - Bharat's app for daily news and videos

Install App

ಟಗರು ಸಿನಿಮಾ ಹಾಗೂ ಶಿವರಾಜ್ ಕುಮಾರ್ ಕುರಿತು ನಟ ಸುದೀಪ್ ಹೇಳಿದ್ದೇನು ಗೊತ್ತಾ…?

Webdunia
ಮಂಗಳವಾರ, 6 ಮಾರ್ಚ್ 2018 (09:00 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಟಗರು ಸಿನಿಮಾದ ಕುರಿತು ಸಾಕಷ್ಟು ಜನ ಮೆಚ್ಚುಗೆ ಮಾತನಾಡಿದ್ದಾರೆ. ಈಗ ನಟ ಸುದೀಪ್ ಕೂಡ ಈ ಸಿನಿಮಾದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಚಿತ್ರದ ಮೇಕಿಂಗ್ ತುಂಬಾ ಇಷ್ಟ ಆಯ್ತು. ಮೊದಲಿಗೆ ಸ್ವಲ್ಪ ಮಟ್ಟಿನ ಗೊಂದಲ ಅನಿಸುತ್ತೆ. ಹಲವಾರು ಪಾತ್ರಗಳು ಗಲಿಬಿಲಿಗೊಳಿಸುತ್ತವೆ. ಆದರೆ ಕತೆ ಮುಂದುವರಿದಂತೆ ನಿರ್ದೇಶಕರು ಎಲ್ಲಾ ಗೊಂದಲಗಳನ್ನು ಒಂದೊಂದಾಗಿ ನಿವಾರಿಸುತ್ತಾರೆ. ನಿರೂಪಣೆ ಅದ್ಭುತವಾಗಿದೆ ಎಂದು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಒಂದು ಬಗೆಯಲ್ಲಿ ಕಥೆಯನ್ನು ನಿರೂಪಿಸಿರುವ ರೀತಿ ಇಷ್ಟವಾಗುತ್ತದೆ. ಸೂರಿ ಅವರಿಗೆ ಇಂತಹ ಚಿತ್ರಕಥೆ ಮತ್ತು ಪಾತ್ರಗಳನ್ನು ಹೆಣೆಯುವಲ್ಲಿ ಅವರಿಗೆ ಅವರೇ ಸಾಟಿ. ಪಾತ್ರಗಳಿಗೆ ಹೆಸರುಗಳನ್ನು ಕೊಡುವಲ್ಲೂ ಅವರು ವಿಶ್ವಕೋಶ ಇದ್ದಂತೆ. ಥಿಯೇಟರ್‌ನಿಂದ ಹೊರಬಂದ ಬಳಿಕವೂ ಚಿಟ್ಟೆ, ಕಾಕ್ರೋಚ್ ಮುಂತಾದ ಎಲ್ಲಾ ಪಾತ್ರಗಳು ನೆನಪಿನಲ್ಲಿ ಉಳಿಯುತ್ತವೆ.


ಶಿವಣ್ಣನಿಗೆ ಆ ಎನರ್ಜಿ ಎಲ್ಲಿಂದ ಬರುತ್ತದೆ. ಧನಂಜಯ್ ಅವರ ಪಾತ್ರವೂ ಇಷ್ಟವಾಯಿತು. ವಸಿಷ್ಠ ಸಿಂಹ ಧ್ವನಿ, ಹಿನ್ನೆಲೆ ಸಂಗೀತ ಚೆನ್ನಾಗಿದೆ. ಒಂದು ಭಿನ್ನ ರೀತಿಯ ಚಿತ್ರ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ ಕಿಚ್ಚ ಸುದೀಪ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments