Webdunia - Bharat's app for daily news and videos

Install App

ಸಂಕಷ್ಟದಲ್ಲಿ ರವಿಚಂದ್ರನ್ ಕಾಪಾಡಲು ಪತ್ರ ಬರೆದಿದ್ದ ಡಾ. ರಾಜ್

Webdunia
ಸೋಮವಾರ, 19 ಜುಲೈ 2021 (10:52 IST)
ಬೆಂಗಳೂರು: ಈಗ ಎಲ್ಲೆಡೆ ಚಾಲೆಂಜಿಂಗ್ ಸ್ಟಾರ್ ದರ್ಶನ್-ಇಂದ್ರಜಿತ್, ಉಮಾಪತಿ ಗೌಡ ನಡುವಿನ ಮಾತಿನ ವಾರ್ ಸದ್ದು ಮಾಡುತ್ತಿದೆ. ಇವರ ವೈಮನಸ್ಯ ಸರಿ ಮಾಡಲು ಚಿತ್ರರಂಗದ ಹಿರಿಯರು ಮನಸ್ಸು ಮಾಡಬೇಕು ಎಂಬ ಸಲಹೆಗಳೂ ಕೇಳಿಬರುತ್ತಿವೆ. ಅದರ ನಡುವೆ ಹಿಂದೊಮ್ಮೆ ಕನ್ನಡದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ರವಿಚಂದ್ರನ್ ವಿರುದ್ಧ ಉಂಟಾಗಿದ್ದ ಆಕ್ರೋಶವನ್ನು ಡಾ. ರಾಜ್ ಕುಮಾರ್ ಬಗೆಹರಿಸಿದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ತಮ್ಮ ಆರಂಭದ ದಿನಗಳಲ್ಲಿ ರವಿಚಂದ್ರನ್ ಕನ್ನಡದ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ ಎಂದು ಸುದ್ದಿಯಾಗಿತ್ತು. ಇದರಿಂದ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಡಾ. ರಾಜ್ ಬಹಿರಂಗ ಪತ್ರ ಬರೆದು, ಸಮಸ್ಯೆ ಬಗೆಹರಿಸಿದ್ದರು. ಇದು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಅಂದಿನ ಪತ್ರಿಕಾ ತುಣುಕು ಈಗ ವೈರಲ್ ಆಗಿದೆ.

ಕನ್ನಡ  ಸಿನಿಮಾ ರಂಗಕ್ಕೆ, ಕಲೆಗೆ ಸೇವೆ ಸಲ್ಲಿಸುತ್ತಿರುವ ವೀರಸ್ವಾಮಿ ಪುತ್ರರಾದ ರವಿಚಂದ್ರನ್ ಕನ್ನಡಕ್ಕೆ ಅವಮಾನ ಮಾಡಿರುವ ಸಾಧ‍್ಯತೆ ಕಡಿಮೆ. ಹಾಗಿದ್ದರೂ ಒಂದು ವೇಳೆ ಮಾಡಿದ್ದಲ್ಲಿ ಅವರ ಪರವಾಗಿ ಕ್ಷಮೆ ಕೋರುತ್ತೇವೆ. ಸಹೃದಯರಾದ ಕನ್ನಡಿಗರು ಅವರನ್ನು ಕ್ಷಮಿಸಿ ಎಂದು ಪತ್ರದಲ್ಲಿ ಡಾ.ರಾಜ್ ಕೋರಿದ್ದರು. ಇಂದು ಇಂತಹ ನಾಯಕನ ಅಗತ್ಯ ಚಿತ್ರರಂಗಕ್ಕಿದೆ ಎಂದು ಈ ಪತ್ರ ನೋಡಿ ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments