Webdunia - Bharat's app for daily news and videos

Install App

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

Krishnaveni K
ಬುಧವಾರ, 30 ಜುಲೈ 2025 (10:45 IST)
Photo Credit: X

ಬೆಂಗಳೂರು: ಒಂದೆಡೆ ರಮ್ಯಾ, ಪ್ರಥಮ್ ಮತ್ತು ಡಿಬಾಸ್ ಫ್ಯಾನ್ಸ್ ನಡುವೆ ವಾರ್ ಆಗುತ್ತಿದ್ದರೆ ಇತ್ತ ನಟ ದರ್ಶನ್ ಎಲ್ಲಿದ್ದಾರೆ ಗೊತ್ತಾ? ಇದ್ಯಾವುದರ ಬಗ್ಗೆಯೂ ಅವರು ತಲೆಯೇ ಕೆಡಿಸಿಕೊಂಡಂತಿಲ್ಲ.

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ್ದಕ್ಕೆ ದರ್ಶನ್ ರ 43 ಅಭಿಮಾನಿಗಳ ಖಾತೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಅಭಿಮಾನಿಗಳು ದಾಳಿ ಮಾಡಿದ್ದಕ್ಕೆ ದರ್ಶನ್ ಬಂದು ಸ್ಪಷ್ಟನೆ ಕೊಡಬೇಕು ಎಂದು ಬಿಗ್ ಬಾಸ್ ಪ್ರಥಮ್ ಧರಣಿ ನಡೆಸುತ್ತಿದ್ದಾರೆ.

ಇವರಿಬ್ಬರೂ ಹೀಗೆ ಮುಗಿಬಿದ್ದಿದ್ದರೆ ಇತ್ತ ದರ್ಶನ್ ಮಾತ್ರ ಇದ್ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೇ ಪತ್ನಿ ಜೊತೆ ಟೆಂಪಲ್ ರನ್ ನಡೆಸಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಜಾಮೀನು ತೀರ್ಪು ಇರುವ ಬೆನ್ನಲ್ಲೇ ದರ್ಶನ್ ದೇವರ ಮೊರೆ ಹೋಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗಲೂ ವಿಜಯಲಕ್ಷ್ಮಿ ಅವರು ಈ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಸಾದ ತಂದಿದ್ದರು. ಆಗ ಕಟ್ಟಿದ್ದ ಹರಕೆಯನ್ನು ಈಗ ವಿಜಯಲಕ್ಷ್ಮಿ ಪತಿ ಜೊತೆ ಹೋಗಿ ತೀರಿಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಬಂದ ಬಳಿಕ ದರ್ಶನ್ ನಿರಂತರವಾಗಿ ಟೆಂಪಲ್ ರನ್ ನಡೆಸುತ್ತಿದ್ದಾರೆ. ಇದೀಗ ರಮ್ಯಾ ವಿರುದ್ಧ ಮತ್ತು ಪ್ರಥಮ್ ವಿರುದ್ಧ ಡಿಬಾಸ್ ಅಭಿಮಾನಿಗಳು ವಿವಾದ ಮಾಡಿಕೊಂಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ದರ್ಶನ್ ಮೌನ ಮುರಿಯುತ್ತಾರಾ ಕಾದು ನೋಡಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments