Webdunia - Bharat's app for daily news and videos

Install App

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Krishnaveni K
ಗುರುವಾರ, 14 ಆಗಸ್ಟ್ 2025 (11:30 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಏಳು ಆರೋಪಿಗಳ ಜಾಮೀನು ರದ್ದು ಮಾಡಲಾಗಿದೆ. ಈಗ ದರ್ಶನ್ ಯಾವ ಜೈಲಿಗೆ ಹೋಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಜಾಮೀನು ಪಡೆದು ಹೊರಬರುವ ಮುನ್ನ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಅದಕ್ಕೆ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಆದರೆ ಅಲ್ಲಿ ಅವರಿಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಇನ್ನು, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಹೀಗಾಗಿ ದರ್ಶನ್ ರನ್ನು ಬಳ್ಳಾರಿ ಜೈಲಿಗೇ ಕಳುಹಿಸುವ ಸಾಧ್ಯತೆಯಿದೆ. ಇನ್ನು ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿಗೇ ಕಳುಹಿಸುವ ಸಾಧ್ಯತೆಯಿದೆ. ಇಂದು ಸಂಜೆಯೊಳಗಾಗಿ ಪೊಲೀಸರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇದಕ್ಕೆ ಮೊದಲು ಅವರು ಜಾಮೀನು ರದ್ದು ಆದೇಶ ಪ್ರತಿಯನ್ನು ಪಡೆದು ಓದಿ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಿದ್ದಾರೆ. ವಿಚಾರಣಾಧಿಕಾರಿ ಎಸಿಪಿ ಚಂದನ್ ಜಾಮೀನು ರದ್ದು ಪ್ರತಿಯನ್ನು ಪಡೆದು ವಿಚಾರಣಾಧೀನ ಕೋರ್ಟ್ ಗೆ ನೀಡಲಿದ್ದಾರೆ. ಬಳಿಕ ಅವರನ್ನು ಯಾವ ಜೈಲಿಗೆ ಕಳುಹಿಸಲಾಗುತ್ತದೆ ಎನ್ನುವುದು ಖಚಿತವಾಗಲಿದೆ. ಮೊದಲು ದರ್ಶನ್ ಆಂಡ್ ಗ್ಯಾಂಗ್ ಬಂಧನಕ್ಕೆ ಮತ್ತೆ ಕೋರ್ಟ್ ನಿಂದ ವಾರೆಂಟ್ ಪಡೆಯಬೇಕಾಗುತ್ತದೆ. ಅದಕ್ಕೆ ಮೊದಲು ಶರಣಾಗಲು ಸೂಚನೆ ನೀಡಲಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಸ್ಟಾರ್ ಗಳಿಲ್ಲ, ಅಬ್ಬರವಿಲ್ಲ ಹಾಗಿದ್ರೂ ಕಾಟೇರ ದಾಖಲೆ ಮುರಿದು ಸು ಫ್ರಮ್ ಸೋ

ಸತ್ಯಕ್ಕೆ ಜಯ ಇದ್ದೇ ಇದೆ ಎಂದ ಪವಿತ್ರಾ ಗೌಡ: ಹಾಗಿದ್ರೆ ರೇಣುಕಾಸ್ವಾಮಿ ಸತ್ತಿದ್ದು ಹೇಗೆ ಎಂದ ನೆಟ್ಟಿಗರು

ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ತೂಗುದೀಪ, ಪವಿತ್ರಾ ಗೌಡ ಭವಿಷ್ಯ

ಮುಂದಿನ ಸುದ್ದಿ
Show comments