ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Krishnaveni K
ಗುರುವಾರ, 14 ಆಗಸ್ಟ್ 2025 (11:30 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಏಳು ಆರೋಪಿಗಳ ಜಾಮೀನು ರದ್ದು ಮಾಡಲಾಗಿದೆ. ಈಗ ದರ್ಶನ್ ಯಾವ ಜೈಲಿಗೆ ಹೋಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಜಾಮೀನು ಪಡೆದು ಹೊರಬರುವ ಮುನ್ನ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಅದಕ್ಕೆ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಆದರೆ ಅಲ್ಲಿ ಅವರಿಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಇನ್ನು, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಹೀಗಾಗಿ ದರ್ಶನ್ ರನ್ನು ಬಳ್ಳಾರಿ ಜೈಲಿಗೇ ಕಳುಹಿಸುವ ಸಾಧ್ಯತೆಯಿದೆ. ಇನ್ನು ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿಗೇ ಕಳುಹಿಸುವ ಸಾಧ್ಯತೆಯಿದೆ. ಇಂದು ಸಂಜೆಯೊಳಗಾಗಿ ಪೊಲೀಸರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇದಕ್ಕೆ ಮೊದಲು ಅವರು ಜಾಮೀನು ರದ್ದು ಆದೇಶ ಪ್ರತಿಯನ್ನು ಪಡೆದು ಓದಿ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಿದ್ದಾರೆ. ವಿಚಾರಣಾಧಿಕಾರಿ ಎಸಿಪಿ ಚಂದನ್ ಜಾಮೀನು ರದ್ದು ಪ್ರತಿಯನ್ನು ಪಡೆದು ವಿಚಾರಣಾಧೀನ ಕೋರ್ಟ್ ಗೆ ನೀಡಲಿದ್ದಾರೆ. ಬಳಿಕ ಅವರನ್ನು ಯಾವ ಜೈಲಿಗೆ ಕಳುಹಿಸಲಾಗುತ್ತದೆ ಎನ್ನುವುದು ಖಚಿತವಾಗಲಿದೆ. ಮೊದಲು ದರ್ಶನ್ ಆಂಡ್ ಗ್ಯಾಂಗ್ ಬಂಧನಕ್ಕೆ ಮತ್ತೆ ಕೋರ್ಟ್ ನಿಂದ ವಾರೆಂಟ್ ಪಡೆಯಬೇಕಾಗುತ್ತದೆ. ಅದಕ್ಕೆ ಮೊದಲು ಶರಣಾಗಲು ಸೂಚನೆ ನೀಡಲಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ಮುಂದಿನ ಸುದ್ದಿ
Show comments