Webdunia - Bharat's app for daily news and videos

Install App

ನಾಗರಹಾವು' ಸಿನಿಮಾದ ಒನಕೆ ಓಬವ್ವನ ಪಾತ್ರಕ್ಕೆ ಜಯಂತಿಗಿಂತ ಮೊದಲು ಆಯ್ಕೆಯಾಗಿದ್ದು ಯಾರು ಗೊತ್ತೇ

Webdunia
ಶನಿವಾರ, 14 ಜುಲೈ 2018 (07:05 IST)
ಬೆಂಗಳೂರು : ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರು ನಟಿಸಿದ ಹಿಟ್ ಸಿನಿಮಾ 'ನಾಗರಹಾವು' ಈಗ ಮತ್ತೆ ತೆರೆ ಮೇಲೆ ಬರುತ್ತಿದ್ದು, ಇದೇ ಜುಲೈ 20 ರಂದು ಈ ಸಿನಿಮಾ ಹೊಸ ರೂಪದಲ್ಲಿ ಮರು ಬಿಡುಗಡೆಯಾಗುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ.


ಈ  ಚಿತ್ರದಲ್ಲಿ ಎಲ್ಲರ ಗಮನ ಸೆಳೆದ ಪಾತ್ರವೆಂದರೆ ಅದು  ಹಾಡೋಂದರಲ್ಲಿ ಬರುವ ಓಬವ್ವಳ ಪಾತ್ರ. ಈ ಪಾತ್ರವನ್ನು ಕನ್ನಡದ ಖ್ಯಾತ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರು ನಟಿಸಿ ಎಲ್ಲರು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ದರು. ಆದರೆ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಈ ಪಾತ್ರಕ್ಕೆ ಮೊದಲು ಆಯ್ಕೆ ಮಾಡಿದ್ದು, ಮಿನುಗುತಾರೆ ಕಲ್ಪನ ಅವರನ್ನಂತೆ.


ಆದರೆ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಕಲ್ಪನಾ ಅವರನ್ನು ಭೇಟಿ ಮಾಡಿ 'ನಾಗರಹಾವು' ಚಿತ್ರದಲ್ಲಿನ ಒನಕೆ ಓಬವ್ವ ಪಾತ್ರದಲ್ಲಿ ನೀವು ಅಭಿನಯಿಸುತ್ತೀರಾ ಎಂದು ಕೇಳಿದ್ದಕ್ಕೆ ದಿಟ್ಟಿಸಿ ನೋಡಿದ ಕಲ್ಪನಾ ಅವರು, 'ಅಂತಹ ತುಕಡಾ ಕ್ಯಾರೆಕ್ಟರ್, ನಾನು ಮಾಡೋದಿಲ್ಲ' ಅಂತ ಕಡ್ಡಿ ತುಂಡಾಗುವ ಹಾಗೆ ಹೇಳಿದ್ರಂತೆ. ಕೊನೆಗೆ ಪುಟ್ಟಣ್ಣ ಅವರು ಜಯಂತಿ ಅವರನ್ನು ಕೇಳಿದಾಗ ‘ನಿಮ್ಮ ಸಿನಿಮಾದಲ್ಲಿ ನಾನು ಅಭಿನಯಿಸುತ್ತೇನೆ' ಎಂದು ಒಂದೇ ಉಸಿರಲ್ಲಿ ಓಕೆ ಹೇಳಿದ್ದರಂತೆ. ಈ ವಿಚಾರವನ್ನು ಇತ್ತೀಚೆಗೆ ಸ್ವತಃ ನಟಿ ಜಯಂತಿ ಅವರೇ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments