Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಮನಗೆದ್ದ ಪಾನಿಪೂರಿ ಅಂಗಡಿಯಾತ ಯಾರು? ಹಿನ್ನಲೆಯೇನು?

Webdunia
ಶುಕ್ರವಾರ, 29 ಡಿಸೆಂಬರ್ 2023 (08:40 IST)
ಬೆಂಗಳೂರು: ಕಾಟೇರ ಸಿನಿಮಾ ಪ್ರಮೋಷನ್ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಾನಿಪೂರಿ ಅಂಗಡಿಯೊಬ್ಬರ ಬಗ್ಗೆ ಹೇಳಿದ್ದು ಈಗ ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಸಂದರ್ಶನವೊಂದರಲ್ಲಿ ದರ್ಶನ್, ಬೆಂಗಳೂರಿನ ನಾಗರಭಾವಿಯಲ್ಲಿ ವಿಕಲಚೇತನರೊಬ್ಬರು ನಡೆಸುತ್ತಿರುವ ಪಾನಿಪೂರಿ ಅಂಗಡಿ ಬಗ್ಗೆ ಮಾತನಾಡಿದ್ದರು. ಅವರು ನಮಗೆ ಸ್ಪೂರ್ತಿ. ಅಂಗ ವೈಫಲ್ಯವಿದೆಯೆಂದು ಯಾರ ಬಳಿಯೂ ಭಿಕ್ಷೆ ಬೇಡುತ್ತಿಲ್ಲ. ಬದಲಾಗಿ ತಾವೇ ನಾಲ್ಕು ಜನಕ್ಕೆ ಕೆಲಸ ಕೊಡುವ ಹಾಗೆ ಆಗಿದ್ದಾರೆ. ಅವರೆಲ್ಲಾ ನಮಗೆ ಸ್ಪೂರ್ತಿ ಎಂದಿದ್ದಾರೆ.

ಜೊತೆಗೆ ತಮ್ಮ ಸಂಗಡಿಗರಿಗೆ ಆ ಅಂಗಡಿಗೆ ಒಮ್ಮೆ ತಾನು ಹೋಗಬೇಕು ಎಂದು ಹೇಳಿಕೊಂಡಿದ್ದಾಗಿ ದರ್ಶನ್ ಹೇಳಿದ್ದರು. ಅವರ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದೀಗ ಆ ಚಾಟ್ಸ್ ಅಂಗಡಿ ಕೂಡಾ ಫೇಮಸ್ ಆಗಿದೆ.

ನಾಗರಭಾವಿಯಲ್ಲಿ ಹೊಟ್ಟೆಪಾಡು ಚಾಟ್ಸ್ ಎಂಬ ಚಾಟ್ಸ್ ಸೆಂಟರ್ ಇದೆ. ವೀರೇಶ್ ಅದರ ಮಾಲಿಕರು. ಅವರಿಗೆ ಒಂದು ಕಾಲು ಊನವಿದೆ. ಹಾಗಂತ ಅವರು ಸುಮ್ಮನೇ ಕುಳಿತಿಲ್ಲ. ಚಿಕ್ಕದಾಗಿ ಟ್ರಕ್ ಒಂದರಲ್ಲಿ ಶುರು ಮಾಡಿದ್ದ ಚಾಟ್ಸ್ ಸೆಂಟರ್ ಈಗ ನಾಲ್ಕು ಜನಕ್ಕೆ ಕೆಲಸ ಕೊಡುವ ಮಟ್ಟಿಗೆ ಬೆಳೆದು ನಿಂತಿದೆ. ಒಂದು ವರ್ಷ ಹಿಂದೆಯೇ ಯೂ ಟ್ಯೂಬ್ ನಲ್ಲಿ ಈ ಹೊಟ್ಟೆಪಾಡು ಚಾಟ್ಸ್ ಬಗ್ಗೆ ಪ್ರಸಾರವಾಗಿತ್ತು. ಆದರೆ ದರ್ಶನ್ ಸಂದರ್ಶನದಲ್ಲಿ ಆ ಸೆಂಟರ್ ಬಗ್ಗೆ ಹೇಳಿದ ಮೇಲೆ ಇದು ಇನ್ನಷ್ಟು ಫೇಮಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments