Select Your Language

Notifications

webdunia
webdunia
webdunia
webdunia

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೊದಲ ಅತಿಥಿ ಯಾರಾಗಿರಬಹುದು ಗೊತ್ತೇ?!

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೊದಲ ಅತಿಥಿ ಯಾರಾಗಿರಬಹುದು ಗೊತ್ತೇ?!
ಬೆಂಗಳೂರು , ಸೋಮವಾರ, 1 ಏಪ್ರಿಲ್ 2019 (09:10 IST)
ಬೆಂಗಳೂರು: ಇನ್ನೇನು ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ. ಆದರೆ ಈ ಕಾರ್ಯಕ್ರಮಕ್ಕೆ ಕಳೆದ ಆವೃತ್ತಿಯಿಂದಲೂ ಈ ವ್ಯಕ್ತಿ ಬರಬೇಕಿತ್ತು ಎಂದು ಒಬ್ಬ ಗಣ್ಯರ ಹೆಸರು ಕೇಳಿ ಬರುತ್ತಿತ್ತು.


ಅವರು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು. ಸಾಮಾಜಿಕ, ಶಿಕ್ಷಣ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಕೊಡುಗೆಗೆ ಜೀ ಕನ್ನಡ ಮೊನ್ನೆಯಷ್ಟೇ ಹೆಮ್ಮೆಯ ಕನ್ನಡಿಗ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ.

ಅವರನ್ನು ಒಮ್ಮೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಸಾಧಕರ ಸೀಟ್ ನಲ್ಲಿ ನೋಡಬೇಕೆಂದು ಅಭಿಮಾನಿಗಳು ಒತ್ತಾಯಿಸುತ್ತಲೇ ಇದ್ದರು. ಆದರೆ ಕಾರಣಾಂತರಗಳಿಂದ ಅವರಿಗೆ ಬರಲಾಗುತ್ತಿರಲಿಲ್ಲ. ಆದರೆ ಈ ಬಾರಿ ಖಂಡಿತಾ ಬರುತ್ತೇನೆ ಎಂದು ರಮೇಶ್ ಅರವಿಂದ್ ಗೆ ವೀರೇಂದ್ರ ಹೆಗ್ಡೆಯವರು ಭರವಸೆ ನೀಡಿದ್ದಾರೆ. ಹೀಗಾಗಿ ಅವರೇ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ಆವೃತ್ತಿಯ ಮೊದಲ ಸಾಧಕರಾದರೂ ಅಚ್ಚರಿಯೇನಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮಗಳು ಹುಟ್ಟಿದ ಬಳಿಕ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್!