Webdunia - Bharat's app for daily news and videos

Install App

ಬಿಗ್ ಬಾಸ್ ವೇದಿಕೆಗೆ ಕಿಚ್ಚ ಸುದೀಪ್ ಚಪ್ಪಲಿ ಧರಿಸದೇ ಬರಲು ಇವರೇ ಕಾರಣ

Krishnaveni K
ಭಾನುವಾರ, 6 ಅಕ್ಟೋಬರ್ 2024 (16:25 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ನಿನ್ನೆ ಮೊದಲ ವಾರದ ಕತೆ ಕಿಚ್ಚನ ಜೊತೆ ಎಪಿಸೋಡ್ ಪ್ರಸಾರವಾಗಿತ್ತು. ಈ ಎಪಿಸೋಡ್ ಗೆ ಬರುವಾಗ ಕಿಚ್ಚನ ಕಾಲಿಗೆ ಚಪ್ಪಲಿಯೇ ಧರಿಸಿರಲಿಲ್ಲ. ಇದಕ್ಕೆ ಕಾರಣ ಈಗ ಬಯಲಾಗಿದೆ.

ಕಿಚ್ಚ ಸುದೀಪ್ ಸಾಮಾನ್ಯವಾಗಿ ಡ್ರೆಸ್ ಜೊತೆಗೆ ಸಖತ್ ಸ್ಟೈಲಿಶ್ ಚಪ್ಪಲಿ, ಶೂ ಧರಿಸಿಯೇ ವೇದಿಕೆಗೆ ಬರುತ್ತಾರೆ. ಆದರೆ ಈ ಬಾರಿ ಕಿಚ್ಚ ಬರಿಗಾಲಲ್ಲಿ ಬಂದಿದ್ದು ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ. ಇದಕ್ಕೆ ಅವರು ಕಾರಣವನ್ನೂ ವೇದಿಕೆಯಲ್ಲಿಯೇ ನೀಡಿದ್ದಾರೆ. ಇದಕ್ಕೆಲ್ಲಾ ತಮ್ಮ ಅಮ್ಮನೇ ಕಾರಣ ಎಂದಿದ್ದಾರೆ.

ಇದೀಗ ನವರಾತ್ರಿ ಆರಂಭವಾಗಿದ್ದು, ಅಮ್ಮನಿಗಾಗಿ ಸುದೀಪ್ ವ್ರತ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಕಾಲಿಗೆ ಚಪ್ಪಲಿ ಧರಿಸದೇ ಬರಿಗಾಲಲ್ಲಿ ವೇದಿಕೆಗೆ ಬಂದಿದ್ದರು. ಜೊತೆಗೆ ಅಮ್ಮನ ಅಣತಿಯಂತೆ ಬೂದು ಬಣ್ಣದ ಡ್ರೆಸ್ ನಲ್ಲಿ ಬಂದಿದ್ದರು. ಹೀಗಾಗಿ ಕಾರ್ಯಕ್ರಮ ಆರಂಭವಾಗುವ ಮೊದಲು ಈಗ ಓಕೆನಾ ಅಮ್ಮ ಎಂದು ಕೇಳಿಯೇ ಸುದೀಪ್ ಕಾರ್ಯಕ್ರಮ ಆರಂಭಿಸಿದ್ದಾರೆ.

ಇನ್ನು ನಿನ್ನೆಯ ಶೋನಲ್ಲಿ ಸುದೀಪ್ ಮನೆಯವರಿಗೆ ಅದರಲ್ಲೂ ವಿಶೇಷವಾಗಿ ಲಾಯರ್ ಜಗದೀಶ್ ಗೆ ಅವರು ಮಾಡಿದ ತಪ್ಪುಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇಂದು ಸಂಡೇ ವಿತ್ ಸುದೀಪ್ಇರಲಿದ್ದು, ಈ ವಾರ ಮನೆಯಿಂದ ಹೊರಹೋಗಲಿರುವ ಸ್ಪರ್ಧಿ ಯಾರು ಎಂದು ಇಂದು ಅಧಿಕೃತವಾಗಿ ಕಿಚಚ ಘೋಷಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments