Webdunia - Bharat's app for daily news and videos

Install App

ನಟ ಆದಿತ್ಯ ಕಥೆ ಕೇಳುವುದರ ಬಗ್ಗೆ ಆಸಕ್ತಿ ಕಳೆದುಕೊಂಡಿದ್ಯಾಕೆ?

Webdunia
ಭಾನುವಾರ, 17 ಜೂನ್ 2018 (14:12 IST)
ಬೆಂಗಳೂರು : ‘ಆದಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಆದಿತ್ಯ ಅವರಿಗೆ ಇತ್ತೀಚೆಗೆ ಕಥೆ ಕೇಳುವುದರ ಬಗ್ಗೆ ಆಸಕ್ತಿಯೇ ಇಲ್ಲವಂತೆ.


ನಟ ಆದಿತ್ಯ ಅವರು ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಅವರು ತುಂಬಾ ಫೇಮಸ್ ಆಗಿದ್ದು ‘ಡೆಡ್ಲಿ ಸೋಮ’ ಚಿತ್ರದ ಮೂಲಕ. ಆದ್ದರಿಂದ ಅವರಿಗೆ ಕಥೆ ಹೇಳಲು ಬಂದವರು ಬರೀ ಅಂಡರ್‌ವರ್ಲ್ಡ್‌‌ ಕಥೆನೇ ಹೇಳುತ್ತಾರಂತೆ. ಇದರಿಂದ ಅವರಿಗೆ ಕಥೆ ಕೇಳುವುದರ ಬಗ್ಗೆ ಆಸಕ್ತಿಯೇ ಇಲ್ಲದಂತಾಗಿದೆಯಂತೆ.


ಈ ಬಗ್ಗೆ  ನಟ ಆದಿತ್ಯ ಅವರು ಇತ್ತೀಚೆಗೆ ‘ಲೈಫ್‌ ಜತೆ ಒಂದು ಸೆಲ್ಫಿ’ ಚಿತ್ರದ ಆಡಿಯೋ ಹಾಗೂ ಟ್ರೈಲರ್ ಲಾಂಚ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ತಿಳಿಸಿದ್ದಾರೆ. ‘ನಾನು ಇತ್ತೀಚಿಗೆ ಕಥೆ ಕೇಳೋದನ್ನೇ ಬಿಟ್ಟಿದ್ದೇನೆ. ಕಥೆ ಹೇಳಲು ಬಂದವರು ಬರೀ ಅಂಡರ್‌ವರ್ಲ್ಡ್‌‌ ಕಥೆನೇ ಹೇಳುತ್ತಾರೆ. ಇದರಿಂದ ಬೇಸತ್ತು ಹೋಗಿದ್ದೇನೆ. ಹೀಗಾಗಿ ಕಥೆ ಕೇಳೋದನ್ನೆ ನಿಲ್ಲಿಸಿಬಿಟ್ಟಿದ್ದೇನೆ. ಕನ್ನಡಕ್ಕೆ ಹೊಸತನವಿರುವ ಚಿತ್ರಗಳು ಬೇಕಾಗಿವೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments