Select Your Language

Notifications

webdunia
webdunia
webdunia
webdunia

ಬಿಗ್‌ಬಾಸ್‌ ಎಂಟ್ರಿಯಾಗುತ್ತಿರುವ ಚೈತ್ರ ಕುಂದಾಪುರ ಜೈಲು ಶಿಕ್ಷೆ ಅನುಭವಿಸಿದ್ದೇಕೆ

ಬಿಗ್‌ಬಾಸ್‌ ಎಂಟ್ರಿಯಾಗುತ್ತಿರುವ ಚೈತ್ರ ಕುಂದಾಪುರ ಜೈಲು ಶಿಕ್ಷೆ ಅನುಭವಿಸಿದ್ದೇಕೆ

Sampriya

ಬೆಂಗಳೂರು , ಭಾನುವಾರ, 29 ಸೆಪ್ಟಂಬರ್ 2024 (16:40 IST)
ಮೂರನೇ ಸ್ಪರ್ಧಿಯಾಗಿ ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಡುತ್ತಿರುವ ಚೈತ್ರಾ ಕುಂದಾಪುರ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದವರು. ಇದೀಗ ಇವರು ಬಿಗ್‌ಬಾಸ್‌ಗೆ ಎಂಟ್ರಿಕೊಡುತ್ತಿರುವುದು  ಚರ್ಚೆಗೆ ಗ್ರಾಸವಾಗಿದೆ.

ಹಿಂದೂ ಪರ ಭಾಷಣ ಮಾಡಿ ಖ್ಯಾತಿ ಗಳಿಸಿದ ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಭಾರೀ ಮೊತ್ತದ ಹಣ ವಂಚನೆ ಮಾಡಿದ್ದರು. ಈ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಜೈಲುವಾಸ ಅನುಭವಿಸಿದ್ದರು. 7 ಕೋಟಿ ರೂಪಾಯಿ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಕಲಿ ನಾಯಕರನ್ನು ಸೃಷ್ಟಿ ಮಾಡಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಜೈಲು ಪಾಲಾಗಿದ್ದರು. ಬಿಡುಗಡೆ ನಂತರ ಚೈತ್ರಾ ಕುಂದಾಪುರು ಹೆಚ್ಚಾಗಿ ಸಾರ್ವಜನಿಕ ಸಭೆಗಳಲ್ಲಿ ಕಾಣಲಿಲ್ಲ.

ಇದೀಗ ಬಿಗ್‌ಬಾಸ್‌ಗೆ ಎಂಟ್ರಿಯಾಗುವ ಮೂಲಕ ಮತ್ತೇ ಸುದ್ದಿಯಾಗಿದ್ದಾರೆ. ನಿಜ ಜೀವನದಲ್ಲಿ ಸೆರೆವಾಸ ಅನುಭವಿಸಿದ ಚೈತ್ರಾ ಕುಂದಾಪುರ ಇದೀಗ ದೊಡ್ಮನೆಯಲ್ಲಿ ಸ್ವರ್ಗಕ್ಕೆ ಹೋಗುತ್ತಾರಾ ಅಥವಾ ನರಕಕ್ಕೆ ಹೋಗುತ್ತಾರಾ ಕಾದು ನೋಡಬೇಕಿದೆ.





Share this Story:

Follow Webdunia kannada

ಮುಂದಿನ ಸುದ್ದಿ

ನಟ ಬಾಲಚಂದ್ರ ಮೆನನ್ ವಿರುದ್ಧ ಆಕ್ಷೇಪಾರ್ಹ ವಿಡಿಯೋ: ಯೂಟ್ಯೂಬರ್ ವಿರುದ್ಧ ದೂರು