Webdunia - Bharat's app for daily news and videos

Install App

ಬಿಗ್‌ಬಾಸ್‌ ಎಂಟ್ರಿಯಾಗುತ್ತಿರುವ ಚೈತ್ರ ಕುಂದಾಪುರ ಜೈಲು ಶಿಕ್ಷೆ ಅನುಭವಿಸಿದ್ದೇಕೆ

Sampriya
ಭಾನುವಾರ, 29 ಸೆಪ್ಟಂಬರ್ 2024 (16:40 IST)
ಮೂರನೇ ಸ್ಪರ್ಧಿಯಾಗಿ ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಡುತ್ತಿರುವ ಚೈತ್ರಾ ಕುಂದಾಪುರ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದವರು. ಇದೀಗ ಇವರು ಬಿಗ್‌ಬಾಸ್‌ಗೆ ಎಂಟ್ರಿಕೊಡುತ್ತಿರುವುದು  ಚರ್ಚೆಗೆ ಗ್ರಾಸವಾಗಿದೆ.

ಹಿಂದೂ ಪರ ಭಾಷಣ ಮಾಡಿ ಖ್ಯಾತಿ ಗಳಿಸಿದ ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಭಾರೀ ಮೊತ್ತದ ಹಣ ವಂಚನೆ ಮಾಡಿದ್ದರು. ಈ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಜೈಲುವಾಸ ಅನುಭವಿಸಿದ್ದರು. 7 ಕೋಟಿ ರೂಪಾಯಿ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಕಲಿ ನಾಯಕರನ್ನು ಸೃಷ್ಟಿ ಮಾಡಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಜೈಲು ಪಾಲಾಗಿದ್ದರು. ಬಿಡುಗಡೆ ನಂತರ ಚೈತ್ರಾ ಕುಂದಾಪುರು ಹೆಚ್ಚಾಗಿ ಸಾರ್ವಜನಿಕ ಸಭೆಗಳಲ್ಲಿ ಕಾಣಲಿಲ್ಲ.

ಇದೀಗ ಬಿಗ್‌ಬಾಸ್‌ಗೆ ಎಂಟ್ರಿಯಾಗುವ ಮೂಲಕ ಮತ್ತೇ ಸುದ್ದಿಯಾಗಿದ್ದಾರೆ. ನಿಜ ಜೀವನದಲ್ಲಿ ಸೆರೆವಾಸ ಅನುಭವಿಸಿದ ಚೈತ್ರಾ ಕುಂದಾಪುರ ಇದೀಗ ದೊಡ್ಮನೆಯಲ್ಲಿ ಸ್ವರ್ಗಕ್ಕೆ ಹೋಗುತ್ತಾರಾ ಅಥವಾ ನರಕಕ್ಕೆ ಹೋಗುತ್ತಾರಾ ಕಾದು ನೋಡಬೇಕಿದೆ.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments