Webdunia - Bharat's app for daily news and videos

Install App

ನಟಿ ಅನುಷ್ಕಾ ರಲ್ಲಿ ದಿಲ್ಲಿ ಪೊಲೀಸರು ಮನವಿ ಮಾಡಿಕೊಂಡಿದ್ದು ಯಾಕೆ..?

Webdunia
ಶನಿವಾರ, 7 ಏಪ್ರಿಲ್ 2018 (09:41 IST)
ನವದೆಹಲಿ: ದಿಲ್ಲಿಯಲ್ಲಿ ರಸ್ತೆ ಅಪಘಾತದ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಂಚಾರಿ ನಿಯಮಗಳ ಬಗ್ಗೆ ವಾಹನ ಸವಾರರಿಗೆ ಅರಿವು ಮೂಡಿಸುವುದಕ್ಕಾಗಿ ಇದೀಗ ದಿಲ್ಲಿ ಪೊಲೀಸರು ‘ಸೂಯಿ ಧಾಗಾ – ಮೇಡ್ ಇನ್ ಇಂಡಿಯಾ’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿರುವ ವರುಣ್ ಧವನ್ ಹಾಗೂ ಅನುಷ್ಕಾ ಶರ್ಮಾ ಅವರಲ್ಲಿ ವಿನಂತಿಸಿಕೊಂಡಿದ್ದಾರೆ.


ವರುಣ್ ಧವನ್ ಹಾಗೂ ಅನುಷ್ಕಾ ಶರ್ಮಾ ಅವರು ನಟಿಸುತ್ತಿರುವ ‘ಸೂಯಿ ಧಾಗಾ – ಮೇಡ್ ಇನ್ ಇಂಡಿಯಾ’ ಚಿತ್ರದ ಶೂಟಿಂಗ್ ದಿಲ್ಲಿಯ ಚಾಂದಿನಿ ಚೌಕ್, ಶಂಕರ್ ಮಾರ್ಕೆಟ್ ಪ್ರದೇಶದಲ್ಲಿ ನಡೆಯುತ್ತಿದ್ದು, ಇದನ್ನು ಅರಿತ ದಿಲ್ಲಿ ಪೊಲೀಸರು ಅವರ ಜೊತೆ ಟ್ರಾಫಿಕ್ ನಿಯಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವಂತೆ ದಿಲ್ಲಿಯಲ್ಲಿ ಒಂದು ವಿಶೇಷ ಕಾರ್ಯಕ್ರಮ  ನಡೆಸಬೇಕು ಎಂದುಕೊಂಡಿದ್ದಾರೆ. ಆದರೆ ಅವರು ಬಿಝಿಯಾಗಿದ್ದ ಕಾರಣ ವೀಡಿಯೋ ಒಂದನ್ನು ಚಿತ್ರೀಕರಿಸಿಕೊಂಡು ಅದನ್ನು ದಿಲ್ಲಿ ಪೊಲೀಸ್ ತನ್ನ ಅಧಿಕೃತ ಟ್ವಿಟರ್ ಮೂಲಕ ಬಿಡುಗಡೆ ಮಾಡಿದೆ.


ಆ ವೀಡಿಯೋದಲ್ಲಿ ಅನುಷ್ಕಾ ಮಾತನಾಡುತ್ತಾ, 'ನಮ್ಮ ಸುರಕ್ಷತೆಗಾಗಿ ದಿಲ್ಲಿ ಪೊಲೀಸರು ತುಂಬಾ ಕಷ್ಟಪಡುತ್ತಿದ್ದಾರೆ. ಜೀವನ ತುಂಬಾ ಮೌಲ್ಯಯುತವಾದದ್ದು. ದ್ವಿಚಕ್ರವಾಹನ ಸವಾರಿ ಮಾಡುವಾಗ ಎಚ್ಚರದಿಂದ ಇರಬೇಕು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.' ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments