Webdunia - Bharat's app for daily news and videos

Install App

'ಡಾಲಿ' ಧನಂಜಯ್ ಮೂಸಂಬಿ ಜ್ಯೂಸ್ ಮಾರಿದ್ಯಾಕೆ?

Webdunia
ಗುರುವಾರ, 9 ಆಗಸ್ಟ್ 2018 (07:05 IST)
ಬೆಂಗಳೂರು: ‘ಸದಾ ನಿಮ್ಮೊಂದಿಗೆ’ ಎಂಬ ಸಂಚಿಕೆಯಲ್ಲಿ ಸಿನಿ ತಾರೆಯರು ಇನ್ನೊಬ್ಬರಿಗೆ ಸಹಾಯ ಹಸ್ತ ಚಾಚುಚ ಕೆಲಸ ಮಾಡುತ್ತಿದ್ದಾರೆ. ಕಳೆದ ಸಂಚಿಕೆಯಲ್ಲಿ ಸೃಜನ್ ಲೋಕೇಶ್ ಬೇಲ್‍ಪೂರಿ, ಪಾನಿಪೂರಿ, ಮಸಾಲ ಪೂರಿ ಮಾರಿ ಒಂದು ಕುಟುಂಬಕ್ಕೆ ಆಸರೆಯಾಗಿದ್ದರು. ಈಗ ಧನಂಜಯ್ ಅವರು ಮೂಸಂಬಿ ಜ್ಯೂಸ್ ಮಾರುವ ಮೂಲಕ ಒಂದು ಕುಟುಂಬಕ್ಕೆ ಆಧಾರವಾಗಿದ್ದಾರೆ.




ದೋಣಿ ಹತ್ತಿ ಮೀನು ಹಿಡಿದು ಜೀವನ ಸಾಗಿಸುತ್ತಿದ್ದ ಮನೆಯ ಯಜಮಾನ ರವಿ ಸ್ಟ್ರೋಕ್‌ನಿಂದಾಗಿ ಬಲಗೈ ಸ್ವಾಧೀನ ಕಳೆದುಕೊಂಡಿರುವುದರಿಂದ ತನ್ನ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಆದರೆ ಅವರ ಇಬ್ಬರು ಹೆಣ್ಣು ಮಕ್ಕಳೇ ಬೆಳಿಗ್ಗೆ ಐದು ಗಂಟೆಗೆ ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿದು ಮಾರಿ ಅದರಿಂದ ಬಂದ ಹಣದಿಂದ ತಂದೆಯ ಚಿಕಿತ್ಸೆ ಮತ್ತು ಮನೆಯ ಜವಾಬ್ದಾರಿಯನ್ನು ನಡೆಸುತ್ತಿದ್ದಾರೆ.ಇದರ ಜೊತೆಗೆ ತಮ್ಮಿಬ್ಬರ ವಿದ್ಯಾಭ್ಯಾಸವನ್ನು  ಮುಂದುವರಿಸುತ್ತಿದ್ದಾರೆ.


ಆದರೆ ಈಗ ಕುಟುಂಬದ ನಿರ್ವಹಣೆಯ ಜೊತೆಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಆ ಮಕ್ಕಳಿಗೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಇಂತಹ ಕುಟುಂಬಕ್ಕೆ ಸಹಾಯ ಹಸ್ತ ನೀಡಲು ಈ ವಾರದ ಸಂಚಿಕೆಯಲ್ಲಿ ಟಗರು ಖ್ಯಾತಿಯ ಧನಂಜಯ್ ಎನ್ ಆರ್ ಕಾಲೋನಿಯ ಬಸ್ ನಿಲ್ದಾಣದ ಬಳಿಯಲ್ಲಿ ಮೂಸಂಬಿ ಜ್ಯೂಸ್ ಮಾರುತ್ತಾ ರವಿ ಕುಟುಂಬದ ಜತೆಗೆ ಕೈ ಜೋಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments