Webdunia - Bharat's app for daily news and videos

Install App

ಹುಚ್ಚ 2 ಚಿತ್ರ ಇಷ್ಟು ತಡವಾಗಲು ಕಾರಣ ಯಾರು…?

Webdunia
ಗುರುವಾರ, 5 ಏಪ್ರಿಲ್ 2018 (07:52 IST)
ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮದರಂಗಿ ಕೃಷ್ಣ ಅವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ‘ಹುಚ್ಚ-2‘ ಚಿತ್ರ  ಇನ್ನೇನು ಬಿಡುಗಡೆಯಾಗಲಿದೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು.ಆದರೆ ಅದು ತೀರಾ ತಡವಾದ ಕಾರಣದಿಂದ ಈ ಚಿತ್ರ ನಿಂತು ಹೋಗಿದೆಯೆನೋ ಎಂಬ ಅನುಮಾನ ಕೂಡ ಜನರಲ್ಲಿ ಮೂಡಿತ್ತು.


ಆದರೆ ಇದೀಗ ಚಿತ್ರ ಇಷ್ಟು ಲೇಟಾಗಿ ಬಿಡುಗಡೆಯಾಗಲು ಯಾರು ಕಾರಣವೆಂಬುದು ತಿಳಿದುಬಂದಿದೆ. ಇನ್ನೇನು ಬಿಡುಗಡೆಯಾಗಲಿರೋ ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ  ಓಂಪ್ರಕಾಶ್ ರಾವ್ ಅವರು ಮಾತನಾಡಿ ಚಿತ್ರ ತಡವಾಗಲು ತಾವೇ ಕಾರಣ ಎಂಬುದಾಗಿ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು,’ ಯಾವುದೇ ಚಿತ್ರ ನಿರ್ದೇಶನ ಮಾಡೋದಕ್ಕಿಂತಲೂ ಮುನ್ನ ಆ ಚಿತ್ರದ ಟೈಟಲ್ಲು ಪ್ರೇಕ್ಷಕರಲ್ಲಿ ಯಾವ ರೀತಿಯ ನಿರೀಕ್ಷೆ ಹುಟ್ಟು ಹಾಕುತ್ತದೆಂಬುದನ್ನು ಅರಿಯಬೇಕು. ಆ ನಂತರದಲ್ಲಿ ಅದೆಲ್ಲವನ್ನು ನೀಗುವಂಥಾ ರೀತಿಯಲ್ಲಿ ಚಿತ್ರವನ್ನು ರೂಪಿಸಬೇಕು. ಈ ಥರದ ಮನಸ್ಥಿತಿ ಹೊಂದಿದ್ದರಿಂದಲೇ ಚಿತ್ರೀಕರಣಕ್ಕೆ ಹೋಗೋದೇ ಕೊಂಚ ತಡವಾಯ್ತು. ಅದಕ್ಕೆ ಕಾರಣ ನಾನೇ.


ಸ್ವಲ್ಪ ದಿನ ಮೈಂಡ್ ಫ್ರೆಷ್ ಮಾಡಿಕೊಂಡು ಮುಂದುವರೆಸೋಣ ಅಂತಾ ಸುಮ್ಮನಾಗಿದ್ವಿ. ನಮ್ಮ 'ಕಟ್ಟೆ' ಸಿನಿಮಾ ಫ್ಲಾಪ್ ಆಗಿತ್ತು. ಆ ಸಿನಿಮಾ ನಮ್ಮ ತಪ್ಪು ನಿರ್ಧಾರ ಅಂತಾ ಗೊತ್ತಾಗಿತ್ತು. ಹೀಗಾಗಿ ಲೇಟಾಯ್ತು. ಆದರೆ ಚೂರು ತಡವಾದರೂ ಅಂದುಕೊಂಡ ರೀತಿಯಲ್ಲೇ ಚಿತ್ರ ಮಾಡಿದ ಖುಷಿ ಇದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments