Webdunia - Bharat's app for daily news and videos

Install App

ಸೀಜರ್’ ಚಿತ್ರದ ಡೈಲಾಗ್ ಬಗ್ಗೆ ಜನರು ವಿರೋಧ ವ್ಯಕ್ತಪಡಿಸಿದ್ದು ಯಾಕೆ…?

Webdunia
ಶುಕ್ರವಾರ, 6 ಏಪ್ರಿಲ್ 2018 (08:00 IST)
ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯಿಸಿರುವ ‘ಸೀಜರ್’ ಚಿತ್ರದಲ್ಲಿ ಬರುವ ಡೈಲಾಗ್ ಒಂದರ ಬಗ್ಗೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.


ನಿರ್ದೇಶಕ ವಿನಯ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಸೀಜರ್’ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ನಟ ಚಿರಂಜೀವಿ ಸರ್ಜಾ ಅವರು ಜೊತೆಯಾಗಿ ನಟಿಸಿದ್ದು, ಇದೀಗ ಚಿತ್ರದಲ್ಲಿ ರವಿಚಂದ್ರನ್ ಅವರು ಗೋಮಾಂಸದ ಬಗ್ಗೆ ಹೇಳಿರುವ ಡೈಲಾಗ್‌ ಒಂದು ದೀಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಈ ಚಿತ್ರದಲ್ಲಿ ರವಿಚಂದ್ರನ್ ಅವರು,’ 'ಹಸು ತಲೆ ಕಡಿಯೋದು ಹೆತ್ತ ತಾಯಿ ತಲೆಹಿಡಿಯೋದು ಎರಡೂ ಒಂದೇನೆ' ಎಂದು ಹೇಳಿರುವ ಡೈಲಾಗ್ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಕೀಲರಾದ ಬಿಟಿ ವೆಂಕಟೇಶ್ ಪ್ರತಿಕ್ರಿಯಿಸಿದ್ದು, 'ರವಿಚಂದ್ರನ್ ಅವರಿಗೆ ಮಾರುಕಟ್ಟೆ ಇಲ್ಲ. ಕರಿಯರ್‌ನ ಕೊನೆಯ ಹಂತದಲ್ಲಿದ್ದಾರೆ. ಈ ಮಾರ್ಗದ ಮೂಲಕ ಅವರು ಪ್ರಚಾರಕ್ಕೆ ಮುಂದಾಗಿದ್ದಾರೆ. ಬೇರೆಯವರ ಆಹಾರ ಅಭ್ಯಾಸಗಳ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಈ ರೀತಿಯ ಡೈಲಾಗ್ ಹೇಳುವ ಮುನ್ನ ರವಿಚಂದ್ರನ್ ಒಂದಕ್ಕೆ ಎರಡು ಸಲ ಯೋಚಿಸಬೇಕಾಗಿತ್ತು' ಎಂದಿದ್ದಾರೆ.


ಈ ಬಗ್ಗೆ ಮಾತನಾಡಿದ ಸೀಜರ್ ಚಿತ್ರದ ನಿರ್ದೇಶಕ ವಿನಯ್ ಕೃಷ್ಣ ಅವರು,’ ಹೌದು ಚಿತ್ರದ ಟ್ರೈಲರ್‌ನಲ್ಲಿ ಈ ಡೈಲಾಗ್ ಇದೆ. ಇದೇ ರೀತಿಯ ಇನ್ನೂ ಅನೇಕ ಡೈಲಗ್‌ಗಳಿವೆ. ಇದರಲ್ಲಿ ವಿವಾದ ಎಂಬುದು ಏನೂ ಇಲ್ಲ. ಒಬ್ಬ ಹಿಂದೂ ಆಗಿ ಗೋವನ್ನು ಕೊಲ್ಲಬೇಡಿ ಎಂದು ಹೇಳುವುದು ನನ್ನ ಹಕ್ಕು. ಗೋವನ್ನು ನಾನು ದೇವರ ಸಮಾನ ಕಾಣುತ್ತೇನೆ. ಗೋಹತ್ಯೆ ನಿಲ್ಲಿಸಬೇಕು. ಈ ಚಿತ್ರ ಹಿಂದೂ ಸಂಪ್ರದಾಯವನ್ನು ಬೆಂಬಲಿಸುತ್ತದೆ. ಈ ಚಿತ್ರದ ಬಗ್ಗೆ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಸೆನ್ಸಾರ್ ಮಂಡಳಿ ಸಹ ಒಂದೇ ಒಂದು ಕಟ್ ಇಲ್ಲದಂತೆ ಪ್ರಮಾಣ ಪತ್ರ ನೀಡಿದೆ ಎಂದಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments