Webdunia - Bharat's app for daily news and videos

Install App

ಕಿಚ್ಚ ಸುದೀಪ್ ಅವರ ಅಭಿಮಾನಿಯೊಬ್ಬರು ಹೀಗ್ಯಾಕೆ ಉಪವಾಸ ಮಾಡ್ತಿರೋದು?

Webdunia
ಶುಕ್ರವಾರ, 9 ಮಾರ್ಚ್ 2018 (06:20 IST)
ಬೆಂಗಳೂರು : ಇತ್ತಿಚೆಗೆ ತಮ್ಮ ನೆಚ್ಚಿನ ನಟನಿಗಾಗಿ ಅಭಿಮಾನಿಗಳು ಮಾಡುತ್ತಿರುವ ರಂಪಾಟದ ಬಗ್ಗೆ ನಾವು ಆಗಾಗ ಕೇಳುತ್ತಿರುತ್ತೇವೆ. ಅದೇರೀತಿ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟ ಕಿಚ್ಚ ಸುದೀಪ್ಅವರನ್ನು ನೋಡುವ ಸಲುವಾಗ ಅತಿರೇಕವಾಗಿ ವರ್ತಿಸಿದ ಘಟನೆ ಕನಕಪುರ ಬಳಿಯ ಸಾತನೂರಿನ ನಾಗಸೊಂಡೆ ಗ್ರಾಮದಲ್ಲಿ ನಡೆದಿದೆ.


ಕಿಚ್ಚ ಶಿವು ಎಂಬಾತ ಕಿಚ್ಚ ಸುದೀಪ್ ಅವರ ಅಭಿಮಾನಿಯಾಗಿದ್ದು ಈತ ಸುದೀಪ್ ಅವರನ್ನು ಭೇಟಿ ಮಾಡಬೇಕೆಂದು ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿರುವುದಾಗಿ ತಿಳಿಸಿ ಈ ಕುರಿತು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದನ್ನು ನೋಡಿದ ಸುದೀಪ್ ಅವರ ಇತರೆ ಅಭಿಮಾನಿಗಳು ’ಸುದೀಪ್ ಅವರನ್ನು ಭೇಟಿ ಮಾಡಲು ಸಾವಿರ ದಾರಿಯಿದೆ. ಅದನ್ನ ಬಿಟ್ಟು ಈ ರೀತಿ ಮಾಡುವುದು ತಪ್ಪು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿದ ನಟ ಸುದೀಪ್ ಅವರು ‘ನೀವು ಚೆನ್ನಾಗಿದ್ದರೆ ನನಗೆ ಖುಷಿ. ಉಪವಾಸ ಮಾಡಿ ನನಗೆ ನೋವು ಕೊಡಬೇಡಿ. ಭೇಟಿ ಮಾಡಲು ಬೇಕಾಗಿರುವುದು ಸಮಯ, ಪ್ರೀತಿ ಹಾಗೂ ತಾಳ್ಮೆ. ನಿಮ್ಮೆಲ್ಲರ ಪ್ರೀತಿಗೆ ಸದಾ ಚಿರಋಣಿ’ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments