Webdunia - Bharat's app for daily news and videos

Install App

ನಟ ದಿಲೀಪ್ ಬಗ್ಗೆ ತನಿಖಾ ತಂಡದ ಮೂಲಗಳನ್ನು ಆಧರಿಸಿ ಮಲಯಾಳಂ ಮಾಧ್ಯಮ ಹೊರಹಾಕಿದ ಭಯಾನಕ ಸತ್ಯಗಳು!

Webdunia
ಮಂಗಳವಾರ, 11 ಜುಲೈ 2017 (10:29 IST)
ಕೊಚ್ಚಿ: ಮಲಯಾಳಂ ಸೂಪರ್ ಸ್ಟಾರ್ ದಿಲೀಪ್ ಬಹುಭಾಷಾ ತಾರೆಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವುದು ಇಡೀ ಚಿತ್ರರಂಗಕ್ಕೇ ಶಾಕ್ ನೀಡಿದೆ. ಈ ಪ್ರಕರಣದ ಬಗ್ಗೆ ಇದೀಗ ಒಂದೊಂದು ಕತೆಗಳು ಹುಟ್ಟಿಕೊಳ್ಳುತ್ತಿವೆ.


ಮಲಯಾಳಂ ಮಾಧ್ಯಮವೊಂದರಲ್ಲಿ ವರದಿಯಾಗಿರುವ ಪ್ರಕಾರ ನಟನಿಗೆ ಆ ನಟಿಯ ಮೇಲಿದ್ದ ವೈಯಕ್ತಿಕ ವೈಷಮ್ಯವೇ ಈ ಕೃತ್ಯ ನಡೆಸಲು ಕಾರಣ ಎಂದು ವಿಶ್ಲೇಷಿಸಲಾಗಿದೆ. ತನಿಖಾ ತಂಡಗಳ ಮೂಲಗಳನ್ನು ಆಧರಿಸಿ ಮಲಯಾಳಂ ಮಾಧ್ಯಮ ದಿಲೀಪ್ ಯಾಕೆ ಹಾಗೆ ಮಾಡಿರಬಹುದೆಂದು ಅಂದಾಜಿಸಿದೆ.

ಜನಪ್ರಿಯನಾಗಿರುವ ನಟನೊಬ್ಬ ಇಂತಹ ಕೃತ್ಯಕ್ಕೆ ಇಳಿಯಲು ಕಾರಣ ಆತನ ವೈಯಕ್ತಿಕ ಜೀವನದಲ್ಲಿ ನಟಿ ಮಾಡಿದ ಒಂದು ತಪ್ಪು ಆಗಿರಬಹುದು ಎಂದು ತನಿಖಾ ಮೂಲಗಳು ಹೇಳಿವೆಯಂತೆ. ಇದು ಎಷ್ಟರ ಮಟ್ಟಿಗೆ ಸತ್ಯವೆಂದು ಗೊತ್ತಿಲ್ಲ. ಈ ಪ್ರಕರಣದಲ್ಲಿ ನಟ ದಿಲೀಪ್ ತಪ್ಪಿತಸ್ಥರೆಂದು ಸಾಬೀತಾಗಿಲ್ಲ. ಹಾಗಿದ್ದರೂ ಅವರು ಯಾಕೆ ಈ ರೀತಿ ಮಾಡಿರಬಹುದೆಂದು ಮಲಯಾಳಂ ಮಾಧ್ಯಮಗಳಲ್ಲಿ ವಿಶ್ಲೇಷಣೆಯಾಗುತ್ತಿದೆ.

ನಟ ದಿಲೀಪ್ 2015 ರಲ್ಲಿ ಮೊದಲ ಪತ್ನಿ ಮಂಜು ವಾರಿಯರ್ ಗೆ ವಿಚ್ಛೇದನ ನೀಡಿದ್ದರು. ಸಂತ್ರಸ್ತ ನಟಿ ದಿಲೀಪ್ ಮೊದಲ ಪತ್ನಿಯ ಆಪ್ತ ಸ್ನೇಹಿತೆ. ದಿಲೀಪ್ ಮತ್ತು ಮೊದಲ ಪತ್ನಿಯ ನಡುವಿನ ಬಾಂಧವ್ಯ ಕಡಿದು ಬೀಳಲು ಸಂತ್ರಸ್ತ ನಟಿಯೇ ಕಾರಣ ಎಂದು ದಿಲೀಪ್ ನಂಬಿದ್ದರಂತೆ. ಇದೇ ಕಾರಣಕ್ಕೆ ದಿಲೀಪ್ ಹಾಗೆ ಮಾಡಿರಬಹುದು ಎಂದು ಮಾಧ್ಯಮಗಳಲ್ಲಿ ವಿಶ್ಲೇಷಣೆಯಾಗುತ್ತಿದೆ.

ಏನೇ ಆಗಿದ್ದರೂ ತಾನು ನಿರಪರಾಧಿ. ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ನಟ ದಿಲೀಪ್ ಹೇಳಿದ್ದಾರೆ. ನಿನ್ನೆಯಷ್ಟೇ ಬಂಧಿತರಾಗಿರುವ ಅವರನ್ನು ಇದೀಗ 14 ದಿನಗಳ ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ.. ಮಿಕ್ಕಿದ ಅನ್ನ ಬಿಸಿ ಮಾಡಿ ತಿಂದರೆ ಏನಾಗುತ್ತದೆ ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ