Webdunia - Bharat's app for daily news and videos

Install App

ಪವಿತ್ರಾ ಗೌಡ ಎ1 ಆರೋಪಿಯಾಗಿಯೇ ಮುಂದುವರಿಯಲು ಕಾರಣ ಬಯಲು

Krishnaveni K
ಬುಧವಾರ, 4 ಸೆಪ್ಟಂಬರ್ 2024 (11:29 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಚಾರ್ಜ್ ಶೀಟ್ ನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲೂ ಪವಿತ್ರಾ ಗೌಡ ಎ1 ಆರೋಪಿಯಾಗಿಯೇ ಮುಂದುವರಿದಿದ್ದಾರೆ. ಇದಕ್ಕೆ ಕಾರಣವೇನು ಎಂಬುದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾದಾಗ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರು. ಆದರೆ ಬಳಿಕ ವಿಚಾರಣೆ ನಡೆದಂತೆ ದರ್ಶನ್ ಪಾತ್ರ ದೊಡ್ಡದಿದೆ ಎಂಬ ಕಾರಣಕ್ಕೆ ಅವರನ್ನೇ ಎ1 ಆರೋಪಿಯಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು.

ಆದರೆ ಚಾರ್ಜ್ ಶೀಟ್ ನಲ್ಲಿ ಎ1 ಆಗಿಯೇ ಪವಿತ್ರಾ ಗೌಡ ಮುಂದುವರಿದಿದ್ದಾರೆ. ಇದಕ್ಕೆ ಕಾರಣವೂ ಇದೆ. ಈ ಕೊಲೆಗೆ ಮುಖ್ಯ ಕಾರಣ ಪವಿತ್ರಾ ಗೌಡ. ಪಟ್ಟಣಗೆರೆ ಶೆಡ್ ನಲ್ಲಿ ಪವಿತ್ರಾ ಗೌಡ ಇರುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ರೇಣುಕಾಸ್ವಾಮಿಗೆ ಪವಿತ್ರಾ ಹೊಡೆದಿರುವುದೂ ನಿಜವೆಂದು ಸಾಬೀತಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವಾಗ ಆತನನ್ನು ಸಾಯಿಸಿ ಎಂದು ಪವಿತ್ರಾ ಕೋಪದಿಂದ ಹೇಳಿಕೆ ನೀಡಿರುವುದು ಅವರೇ ಎ1 ಆರೋಪಿಯಾಗಿ ಮುಂದುವರಿಯುವುದಕ್ಕೆ ಪ್ರಮುಖ ಕಾರಣವಾಗಿದೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಐದು ಫೋಟೋಗಳು ಲಭ್ಯವಾಗಿದ್ದು ಇದೆಲ್ಲವೂ ಪವಿತ್ರಾಗೆ ಮುಳುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments