Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಿರೂಪಣೆ ಮಾಡಲು ಇವರೇ ಕಾರಣ!

Webdunia
ಬುಧವಾರ, 19 ಜೂನ್ 2019 (10:18 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಆರಂಭವಾಗಲಿದ್ದು, ಈ ಕಾರ್ಯಕ್ರಮಕ್ಕೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಪುನೀತ್ ರಾಜ್ ಕುಮಾರ್ ತಾವು ಶೋ ನಡೆಸಿಕೊಡಲು ಕಾರಣ ಯಾರು ಎಂದು ಬಹಿರಂಗಪಡಿಸಿದ್ದಾರೆ.


ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಇದಕ್ಕೂ ಮೊದಲು ಸುವರ್ಣವಾಹಿನಿಯಲ್ಲಿ ಮೂರು ಸೀಸನ್ ಪ್ರಸಾರವಾಗಿತ್ತು. ಆ ಪೈಕಿ ಮೊದಲ ಎರಡು ಸೀಸನ್ ಗಳಲ್ಲಿ ಪುನೀತ್ ನಿರೂಪಕರಾಗಿದ್ದರು.

ಮೊದಲ ಬಾರಿಗೆ ಈ ಶೋ ನಡೆಸಿಕೊಡಲು ಪವರ್ ಸ್ಟಾರ್ ಬಳಿ ಕೇಳಿಕೊಂಡಾಗ ಹಿಂದಿಯ ಅಮಿತಾಭ್ ಬಚ್ಚನ್ ಕಾರ್ಯಕ್ರಮ ನೋಡಿ ಇವರಿಗೆ ಭಯವಾಗಿತ್ತಂತೆ. ತನಗೂ ಆ ಮಟ್ಟಕ್ಕೆ ಕಾರ್ಯಕ್ರಮ ನಿರೂಪಿಸಲು ಸಾಧ್ಯವೇ ಎಂದು ಹಿಂಜರಿದಿದ್ದರಂತೆ. ಆದರೆ ಅಮ್ಮ ಪಾರ್ವತಮ್ಮ ರಾಜ್ ಕುಮಾರ್, ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಧೈರ್ಯ ತುಂಬಿ ಒಪ್ಪಿಸಿದರಂತೆ.

ಅಂದ ಹಾಗೆ ಈಗಲೂ ನನ್ನ ಜತೆಗೆ ರಾಘವೇಂದ್ರ ರಾಜ್ ಕುಮಾರ್ ಈ ಕಾರ್ಯಕ್ರಮ ನಡೆಸಿಕೊಡಲು ಸಹಾಯ ಮಾಡುತ್ತಾರೆ. ಈ ಜವಾಬ್ಧಾರಿಯುತ ಸೀಟ್ ನಲ್ಲಿ ಕುಳಿತು ನಾನೂ ನನ್ನ ಜ್ಞಾನ ವೃದ್ಧಿಸಿಕೊಳ್ಳುತ್ತಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಮುಂದಿನ ಸುದ್ದಿ
Show comments