Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಿರೂಪಣೆ ಮಾಡಲು ಇವರೇ ಕಾರಣ!

Webdunia
ಬುಧವಾರ, 19 ಜೂನ್ 2019 (10:18 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಆರಂಭವಾಗಲಿದ್ದು, ಈ ಕಾರ್ಯಕ್ರಮಕ್ಕೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಪುನೀತ್ ರಾಜ್ ಕುಮಾರ್ ತಾವು ಶೋ ನಡೆಸಿಕೊಡಲು ಕಾರಣ ಯಾರು ಎಂದು ಬಹಿರಂಗಪಡಿಸಿದ್ದಾರೆ.


ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಇದಕ್ಕೂ ಮೊದಲು ಸುವರ್ಣವಾಹಿನಿಯಲ್ಲಿ ಮೂರು ಸೀಸನ್ ಪ್ರಸಾರವಾಗಿತ್ತು. ಆ ಪೈಕಿ ಮೊದಲ ಎರಡು ಸೀಸನ್ ಗಳಲ್ಲಿ ಪುನೀತ್ ನಿರೂಪಕರಾಗಿದ್ದರು.

ಮೊದಲ ಬಾರಿಗೆ ಈ ಶೋ ನಡೆಸಿಕೊಡಲು ಪವರ್ ಸ್ಟಾರ್ ಬಳಿ ಕೇಳಿಕೊಂಡಾಗ ಹಿಂದಿಯ ಅಮಿತಾಭ್ ಬಚ್ಚನ್ ಕಾರ್ಯಕ್ರಮ ನೋಡಿ ಇವರಿಗೆ ಭಯವಾಗಿತ್ತಂತೆ. ತನಗೂ ಆ ಮಟ್ಟಕ್ಕೆ ಕಾರ್ಯಕ್ರಮ ನಿರೂಪಿಸಲು ಸಾಧ್ಯವೇ ಎಂದು ಹಿಂಜರಿದಿದ್ದರಂತೆ. ಆದರೆ ಅಮ್ಮ ಪಾರ್ವತಮ್ಮ ರಾಜ್ ಕುಮಾರ್, ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಧೈರ್ಯ ತುಂಬಿ ಒಪ್ಪಿಸಿದರಂತೆ.

ಅಂದ ಹಾಗೆ ಈಗಲೂ ನನ್ನ ಜತೆಗೆ ರಾಘವೇಂದ್ರ ರಾಜ್ ಕುಮಾರ್ ಈ ಕಾರ್ಯಕ್ರಮ ನಡೆಸಿಕೊಡಲು ಸಹಾಯ ಮಾಡುತ್ತಾರೆ. ಈ ಜವಾಬ್ಧಾರಿಯುತ ಸೀಟ್ ನಲ್ಲಿ ಕುಳಿತು ನಾನೂ ನನ್ನ ಜ್ಞಾನ ವೃದ್ಧಿಸಿಕೊಳ್ಳುತ್ತಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments