Webdunia - Bharat's app for daily news and videos

Install App

Pushpa 2 release: ಕರ್ನಾಟಕದಲ್ಲಿ ಬೆಳ್ಳಂ ಬೆಳಿಗ್ಗೆಯೇ ಪುಷ್ಪ 2 ಶೋ ರದ್ದು ಮಾಡಿದ್ದು ಯಾಕೆ, ಇಲ್ಲಿದೆ ಕಾರಣ

Krishnaveni K
ಗುರುವಾರ, 5 ಡಿಸೆಂಬರ್ 2024 (12:11 IST)
ಬೆಂಗಳೂರು: ಬಹುನಿರೀಕ್ಷಿತ ಪುಷ್ಪ 2 ಸಿನಿಮಾ ಇಂದು ರಿಲೀಸ್ ಆಗಿದ್ದು ಕರ್ನಾಟಕದಲ್ಲೂ ಸಿನಿಮಾ ಬಿಡುಗಡೆಯಾಗಿದೆ. ಆದರೆ ಬೆಳಿಗ್ಗಿನ ಶೋವನ್ನೇ ಕೆಲವೆಡೆ ರದ್ದು ಮಾಡಲಾಗಿದೆ. ಇದಕ್ಕೆ ಕಾರಣವೂ ಇದೆ.

ಬೆಂಗಳೂರಿನಲ್ಲಿ ಪುಷ್ಪ 2 ಅಬ್ಬರದ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಬೆಳಿಗ್ಗೆಯೇ 40 ಸಿಂಗಲ್ ಸ್ಕ್ರೀನ್ ಶೋಗಳನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣವೂ ಇದೆ. ನಿಯಮಗಳ ಪ್ರಕಾರ ಸಿಂಗಲ್ ಸ್ಕ್ರೀನ್ ಗಳಲ್ಲಿ ಬೆಳಿಗ್ಗೆ 6 ಗಂಟೆಯೊಳಗಿನ ಶೋ ಪ್ರಸಾರ ಮಾಡುವಂತಿಲ್ಲ.

ಆದರೆ ಪುಷ್ಪ 2 ಸಿನಿಮಾವನ್ನು ಬೆಳಿಗ್ಗೆ 3.00 ಮತ್ತು 4.00 ಗಂಟೆಗೆ ಆರಂಭಿಸಲು ಈ ಥಿಯೇಟರ್ ಗಳು ಸಜ್ಜಾಗಿದ್ದವು. ಈ ಕಾರಣಕ್ಕೆ ಈ ಥಿಯೇಟರ್ ಗಳಿಗೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ಸಿನಿಮಾ ಖಾಯಿದೆ 1964 ಪ್ರಕಾರ ಇದು ನಿಯಮಗಳಿಗೆ ವಿರುದ್ಧವಾಗಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು ಈ ಆದೇಶ ನೀಡಿದ್ದಾರೆ.

ಆದರೆ ಪುಷ್ಪ 2 ಸಿನಿಮಾವನ್ನು ಬೆಳಿಗ್ಗಿನ ಮೊದಲ ಶೋ ನೋಡಲು ಈಗಾಗಲೇ ಹಲವು ಫ್ಯಾನ್ಸ್ ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಅವರಿಗೆಲ್ಲಾ ಈಗ ಟಿಕೆಟ್ ಹಣವನ್ನು ಮರಳಿಸುವುದಾಗಿ ಥಿಯೇಟರ್ ಕಡೆಯಿಂದ ಭರವಸೆ ಸಿಕ್ಕಿದೆ. ಮೊದಲ ದಿನ ಬೆಂಗಳೂರಿನಲ್ಲಿ ಪುಷ್ಪ 2 ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments