Webdunia - Bharat's app for daily news and videos

Install App

ʼವಿಂಡೋ ಸೀಟ್ʼ ಬುಕ್ ಮಾಡಿಕೊಂಡ ಅರ್ಜುನ್ ಜನ್ಯ

Webdunia
ಶನಿವಾರ, 29 ಆಗಸ್ಟ್ 2020 (21:08 IST)
ಬೆಂಗಳೂರು: ನಟಿ ಶೀತಲ್ ಶೆಟ್ಟಿ ವಿಂಡೋ ಸೀಟ್ ಮೂಲಕ ಸ್ಯಾಂಡಲ್ ವುಡ್ಗೆ ಡೈರೆಕ್ಟರ್ ಆಗಿ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಸಿನಿಮಾದಲ್ಲಿ ನಿರೂಪ್ ಬಂಡಾರಿ, ಅಮೃತ ಅಯ್ಯರ್ ಮತ್ತು ಸಂಜನಾ ಆನಂದ್ ನಟಿಸುತ್ತಿದ್ದು, ಈಗಾಗಲೇ ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಶೀತಲ್ ಶೆಟ್ಟಿ. ಇದೀಗ ಸಿನಿಮಾದ ಬಗ್ಗೆ ಹೊಸ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.
ಹೌದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕೆಲಸ ಮಾಡುತ್ತಿರುವ ವಿಡಿಯೋವೊಂದನ್ನು ಶೀತಲ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
 
"ತುಂಬಾ ಪ್ರತಿಭಾವಂತ ವ್ಯಕ್ತಿಗಳೊಂದಿಗೆ ಕೆಲಸ ಮಾಡುವುದು ಮತ್ತು ಅರ್ಜುನ್ ಜನ್ಯರಂತೆ ವಿನಮ್ರನಾಗಿ ಕೆಲಸ ಮಾಡುವುದು ಯಾವಾಗಲೂ ಖುಷಿ ನೀಡುತ್ತದೆ. ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ಅರ್ಜುನ್ ಜನ್ಯಾ ಇರುವ ವಿಡಿಯೋ ಹಂಚಿಕೊಂಡು ಅದರ ಬಗ್ಗೆ ಬರೆದುಕೊಂಡಿದ್ದಾರೆ.
 
ಚಿತ್ರದಲ್ಲಿ ಗಿಟಾರ್ ವಾದಕನಾಗಿ ನಿರೂಪ್ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ವರ್ಷದ ಆರಂಭದಲ್ಲಿ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದರೆ,ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ.
ಈ ಮೊದಲು ಸಿನಿಮಾದ ಬಗ್ಗೆ ಶೀತಲ್ ಶೆಟ್ಟಿ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಈ ವರದಿಗಳ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಈ ವರ್ಷದ ಅಂತ್ಯದ ವೇಳೆಗೆ ಚಿತ್ರವು ಬಿಡುಗಡೆಗೆ ಸಜ್ಜಾಗಲಿದೆ.
 
ಇದೊಂದು ರೋಮ್ಯಾಂಟಿಕ್, ಥ್ರಿಲ್ಲರ್ ಕಥೆ ಹೊಂದಿರುವ ಸಿನಿಮಾವಾಗಿದೆ. ಶೀತಲ್ ಶೆಟ್ಟಿ ನಿರ್ದೇಶಕಿಯಾಗಿದ್ದು, ಜಾಕ್ ಮಂಜು ನಿರ್ಮಾಣದ ಹೊಣೆ ಹೊತ್ತಿದ್ದಾರೆ. ವಿಂಡೋ ಸೀಟಿಗೆ ಅರ್ಜುನ್ ಜನ್ಯ ಸಂಗೀತ, ಯೋಗರಾಜ್ ಭಟ್, ಕವಿರಾಜ್, ಸುಮುಖ್ ಗೀತ ಸಾಹಿತ್ಯವಿರಲಿದೆ.
 
Link : https://twitter.com/isheethalshetty/status/1299374656349065217
 
Link : https://www.instagram.com/p/CEcBK_LJlcL/

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments