ಕೃಷ್ಣಂ ಪ್ರಿಯ ಸಖಿ ಈವೆಂಟ್ ನಲ್ಲಿ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ಸಾಹಿತಿ ನಾಗೇಂದ್ರ ಪ್ರಸಾದ್

Krishnaveni K
ಬುಧವಾರ, 14 ಆಗಸ್ಟ್ 2024 (10:39 IST)
Photo Credit: Facebook
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿರುವ ಕೃಷ್ಣಂ ಪ್ರಿಯ ಸಖಿ ಸಿನಿಮಾ ಈವೆಂಟ್ ನಲ್ಲಿ ಸಾಹಿತಿ ನಾಗೇಂದ್ರ ಪ್ರಸಾದ್ ಆಕ್ರೋಶಗೊಂಡ ಘಟನೆ ನಡೆದಿದೆ. ಕೇಸ್ ಹಾಕುವುದಾಗಿಯೂ ವೇದಿಕೆಯಲ್ಲೇ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಎಫ್ ಎಂಗಳಲ್ಲಿ, ವಾಹಿನಿಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಪ್ರಸಾರ ಮಾಡಲಾಗುತ್ತದೆ. ಆದರೆ ಹಾಡು  ಪ್ರಸಾರ ಮಾಡುವಾಗ ಯಾವ ನಾಯಕ ನಟಿಸಿದ ಹಾಡು ಎಂದು ಮಾತ್ರ ಹೇಳಲಾಗುತ್ತಿದೆ. ಹಾಡು ಕೇಳುವಾಗ ಹಾಡುಗಾರ ಯಾರು ಎಂದೂ ಗೊತ್ತಾಗುತ್ತಿದೆ. ಆದರೆ ಸಂಗೀತ ಸಂಯೋಜಕರು ಮತ್ತು ಸಾಹಿತಿಗಳಿಗೆ ಕ್ರೆಡಿಟ್ ಕೊಡುತ್ತಿಲ್ಲ. ಇದು ನಾಗೇಂದ್ರ ಪ್ರಸಾದ್ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಕೃಷ್ಣಂ ಪ್ರಿಯ ಸಖಿ ಸಿನಿಮಾದ ದ್ವಾಪರ ಹಾಡು ಭಾರೀ ಹಿಟ್ ಆಗಿದೆ. ಈ ಹಾಡನ್ನು ಹಾಡಿದವರು ಜಸ್ಕರನ್ ಸಿಂಗ್ ಎಂದು ಎಲ್ಲಾ ಕಡೆ ಪ್ರಚಾರವಾಗಿದೆ. ಆದರೆ ಹಾಡನ್ನುಬರೆದವರು ಯಾರು ಮತ್ತು ಸಂಗೀತ ನಿರ್ದೇಶಕರು ಯಾರು ಎಂದು ಎಲ್ಲೂ ಹೇಳುತ್ತಿಲ್ಲ. ಇನ್ನು ಮುಂದೆ ಹಾಡು ಪ್ಲೇ ಮಾಡುವಾಗ ಸಾಹಿತಿ ಮತ್ತು ಸಂಗೀತ ಸಂಯೋಜಕರ ಹೆಸರನ್ನೂ ಹೇಳಲೇಬೇಕು. ಇಲ್ಲಾಂದ್ರೆ ಕೇಸ್ ಹಾಕ್ತೀವಿ ಎಂದಿದ್ದಾರೆ.

ಕೇಸ್ ಹಾಕಲು ಸರ್ಕಾರ ನಮಗೆ ಕಾನೂನಿನಲ್ಲಿ ಅವಕಾಶ ನೀಡಿದೆ. 3000 ಹಾಡುಗಳನ್ನು ಬರೆದ ನಾನು ಈ ಮಾತು ಹೇಳ್ತಿದ್ದೇನೆ. ಇದನ್ನು ನಾಯಕ ನಟ ಗಣೇಶ್ ಆಗಲೀ ಬೇರೆಯವರಾಗಲೀ ಅನ್ಯಥಾ ಭಾವಿಸಬಾರದು. ಆದರೆ ಹಾಡು ಬರೆದವರು, ಸಂಗೀತ ಸಂಯೋಜಿಸಿದವರಿಗೂ ಬೆಲೆ ಸಿಗಬೇಕು ಎಂದು ನಾಗೇಂದ್ರ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments