ಮೃತ ಅಭಿಮಾನಿಗಳ ಕುಟಂಬಕ್ಕೆ ನಟ ಯಶ್ 5 ಲಕ್ಷ ರೂ. ನೆರವು

Krishnaveni K
ಬುಧವಾರ, 17 ಜನವರಿ 2024 (14:00 IST)
ಬೆಂಗಳೂರು: ಇತ್ತೀಚೆಗಷ್ಟೇ ಮೃತಪಟ್ಟ ತಮ್ಮ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರ ಧನ ನೀಡಿದ್ದಾರೆ.

ಯಶ್ ಹುಟ್ಟಹಬ್ಬದಂದು ಅವರ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದರು. 20 ರ ಹರೆಯದ ಮನೆ ಮಕ್ಕಳನ್ನು ಕಳೆದುಕೊಂಡು ಅವರ ಕುಟುಂಬ ಅನಾಥವಾಗಿತ್ತು.

ಅಭಿಮಾನಿಗಳು ಮೃತಪಟ್ಟ ಸುದ್ದಿ ಕೇಳಿ ಯಶ್ ವಿದೇಶದಿಂದ ನೇರವಾಗಿ ಗದಗದಲ್ಲಿರುವ ಅಭಿಮಾನಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಅಲ್ಲದೆ, ಯಾರೂ ಈ ರೀತಿ ಮಾಡಬೇಡಿ. ನಿಮ್ಮ ಅಭಿಮಾನವನ್ನು ಈ ರೀತಿ ತೋರಿಸಲು ಹೋಗಿ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಮನವಿ ಮಾಡಿದ್ದರು.

ಆ ಸಂದರ್ಭದಲ್ಲಿಯೇ ಯಶ್ ನನ್ನ ಕೈಲಾದ ನೆರವು ನೀಡುವುದಾಗಿ ಕುಟುಂಬದವರಿಗೆ ಭರವಸೆ ನೀಡಿದ್ದರು. ಇದೀಗ ಆ ಭರವಸೆಯನ್ನು ಯಶ್ ಉಳಿಸಿಕೊಂಡಿದ್ದಾರೆ. ತಮ್ಮ ಸ್ನೇಹಿತರ ಮೂಲಕ ಮೃತ ಅಭಿಮಾನಿಗಳ ಮನೆಗೆ ತೆರಳಿ 5 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments