ಬೆಂಗಳೂರು: ತಾನು ನಿರ್ಮಾಣ ಮಾಡಿದ ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ಇದೀಗ ಠಾಣೆ ಮೆಟ್ಟಿಲೇರಿದ್ದಾರೆ.
ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಪುಪ್ಪಾ ಅವರು, ಕಲಾವಿದೆಸ್ವರ್ಣಗೌರಿ ಹಾಗೂ ಪಿಆರ್ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ ದೂರನ್ನು ನೀಡಿದ್ದಾರೆ.
ಈ ದೂರನ್ನು ವಾರದ ಹಿಂದೆಯೇ ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಪಡಿಸಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅದರಂತೆ ದೂರಿನಲ್ಲಿ ಎ1 ಹರೀಶ್ ಅರಸು, ಎ2 ಮನು, ಎ3 ನಿತಿನ್, ಎ4 ಮಹೇಶ್ ಗುರು, ಎ5 ಸ್ವರ್ಣಗೌರಿ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಸ್ವರ್ಣಗೌರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.