Select Your Language

Notifications

webdunia
webdunia
webdunia
Thursday, 10 April 2025
webdunia

ಯಶ್- ವಿಜಯ್ ಕಿರಗಂದೂರು ಧರ್ಮಸ್ಥಳ, ಕುಕ್ಕೆ ದರ್ಶನ

yash kgf kgf-2 dharmastala kukke ಯಶ್ ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ
bengaluru , ಭಾನುವಾರ, 10 ಏಪ್ರಿಲ್ 2022 (15:18 IST)
ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಿತ್ರ ತಂಡ ಭಾನುವಾರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದೆ.
ನಟ ಯಶ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಹಾಗೂ ವಿಜಯ್ ಕಿರಂಗದೂರು ನಂತರ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಮರಳಿದ ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.  ಕುಕ್ಕೆ ಹಾಗೂ ಧರ್ಮಸ್ಥಳ ಭೇಟಿ ಬಳಿಕ ಯಶ್ ಅವರು ಉಜಿರೆಯಲ್ಲಿರುವ ಇತಿಹಾಸ ಪ್ರಸಿದ್ಧ ಸೂರ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಮನವಮಿಗೆ ಹನುಭಕ್ತ ಧ್ರುವ ಸರ್ಜಾರಿಂದ ಫ್ಯಾನ್ಸ್ ಗೆ ಭರ್ಜರಿ ಉಡುಗೊರೆ