‘ಯಶೋಮಾರ್ಗ’ದ ದುರುಪಯೋಗ-ನಟ ಯಶ್ ಗರಂ

Webdunia
ಬುಧವಾರ, 22 ಆಗಸ್ಟ್ 2018 (15:17 IST)
ಬೆಂಗಳೂರು: ನಟ ಯಶ್ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರಂತೆ. ಯಶ್ ಹೀಗೆ ಸಿಟ್ಟಾಗುವುದಕ್ಕೆ ಕಾರಣ ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಂಡಿರುವುದಂತೆ.


ಕೊಡಗು ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಗೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಈ ವಿಚಾರ ತಿಳಿದ ರಾಕಿಂಗ್ ಸ್ಟಾರ್ ಗರಂ ಆಗಿದ್ದಾರೆ.


‘ಯಶೋಮಾರ್ಗ’ ಸಂಸ್ಥೆಯ ಮೂಲಕ ನನ್ನ ಸ್ವಂತ ಸಂಪಾದನೆಯ ಹಣದಲ್ಲಿ ನನ್ನ ಆತ್ಮ ತೃಪ್ತಿಗಾಗಿ ನನ್ನ ಕೈಲಾದ ಮಟ್ಟಿಗೆ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ದೇಣಿಗೆ/ವಂತಿಗೆಯನ್ನು ಜನರಿಂದ ಸ್ವೀಕರಿಸುತ್ತಿಲ್ಲ.
ಆದರೆ, ಇತ್ತೀಚೆಗೆ ಭಾರಿ ಮಳೆಯಿಂದಾಗಿ ನಿರಾಶ್ರಿತರಾದ ಕೊಡಗಿನ ಜನರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗದ ಹೆಸರಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.


ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಇದಕ್ಕಾಗಿ ಯಶೋಮಾರ್ಗದ ಹೆಸರನ್ನು ಬಳಸಬಾರದೆಂದು ವಿನಂತಿಸುತ್ತೇನೆ. ಸಾರ್ವಜನಿಕರ ನೆರವು ಯಶೋಮಾರ್ಗಕ್ಕೆ ಅವಶ್ಯವೆನಿಸುವ ಸಂದರ್ಭದಲ್ಲಿ ನಾನೇ ಖುದ್ದು ನಿಮ್ಮ ಮುಂದೆ ಬರುತ್ತೇನೆ. ಸಧ್ಯಕ್ಕೆ ಯಶೋಮಾರ್ಗದ ಹೆಸರಿನಲ್ಲಿ ದೇಣಿಗೆ ಕೇಳಲು ಬಂದವರಿಗೆ ದೇಣಿಗೆ ನೀಡಬೇಡಿ ಎಂದು ನಾನು ಈ ಸಂದರ್ಭದಲ್ಲಿ ಹೇಳಬಯಸುತ್ತೇನೆ ಎಂದು ಯಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments