ಕಾಮಿಡಿ ಶೋನಿಂದ ಹೊರಬರುತ್ತಾರಾ ಯೋಗರಾಜ್ ಭಟ್? ರಾಘವೇಂದ್ರ ಹುಣಸೂರು ಜೊತೆ ವೈಮನಸ್ಯ?

Webdunia
ಭಾನುವಾರ, 13 ನವೆಂಬರ್ 2022 (09:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಯೋಗರಾಜ್ ಭಟ್ ಮತ್ತು ಜೀ ಕನ್ನಡ ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ನಡುವಿನ ಅಡಿಯೋ ಒಂದು ನಿನ್ನೆ ಬಿಡುಗಡೆಯಾಗಿ ಸಂಚಲನ ಮೂಡಿಸಿತ್ತು.

ಯೋಗರಾಜ್ ಭಟ್ ನಿರ್ದೇಶನದ ಪದವಿ ಪೂರ್ವ ಎಂಬ ಸಿನಿಮಾ ಹಕ್ಕನ್ನು ಖರೀದಿಸುವುದಾಗಿ ರಾಘವೇಂದ್ರ ಹುಣಸೂರು ಪ್ರಾಮಿಸ್ ಮಾಡಿದ್ದರಂತೆ. ಆದರೆ ಈಗ ಫೋನ್ ಕಾಲ್ ಸ್ವೀಕರಿಸದೇ ಸತಾಯಿಸುತ್ತಿದ್ದಾರೆ ಎನ್ನುವುದು ಭಟ್ಟರ ಆಕ್ರೋಶಕ್ಕೆ ಕಾರಣವಾಗಿದೆ.

10 ರಿಂದ 15 ಬಾರಿ ಕರೆ ಮಾಡಿ ವಾರ ಕಳೆದರೂ ರಾಘವೇಂದ್ರ ಕರೆಯೂ ಎತ್ತಿಲ್ಲ, ವಾಪಸ್ ಕರೆಯನ್ನೂ ಮಾಡಿಲ್ಲ. ಇದು ಭಟ್ಟರ ಆಕ್ರೋಶಕ್ಕೆ ಕಾರಣವಾಗಿದೆ. ಕೊನೆಗೆ ಬೇಸತ್ತ ವಾಯ್ಸ್ ನೋಟ್ ಕಳುಹಿಸಿದ್ದು 10 ನಿಮಿಷದಲ್ಲಿ ಕರೆ ಮಾಡದೇ ಇದ್ದರೆ ಅಡಿಯೋ ಒಂದನ್ನು ಹೊರಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಅದರಂತೆ ಕೆಲವು ಸಮಯದ ಬಳಿಕ ಭಟ್ಟರು ತಮ್ಮದೇ ಶೈಲಿಯಲ್ಲಿ ರಾಘವೇಂದ್ರ ಹುಣಸೂರುಗೆ ಯದ್ವಾ ತದ್ವಾ ಬೈದು ಅಡಿಯೋ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಗೊತ್ತಿರುವ ಹಾಗೆ ಯೋಗರಾಜ್ ಭಟ್ ಇದೇ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಶೋನ ತೀರ್ಪುಗಾರರಲ್ಲೊಬ್ಬರು. ಈ ಘಟನೆ ಬಳಿಕ ಯೋಗರಾಜ್ ಭಟ್ ಶೋನಿಂದ ಹೊರನಡೆಯುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments