Select Your Language

Notifications

webdunia
webdunia
webdunia
webdunia

ಹಿಂದಿ ವಿವಾದಕ್ಕೆ ಯೋಗರಾಜ್ ಭಟ್ ಸ್ಪಷ್ಟನೆ

ಹಿಂದಿ ವಿವಾದಕ್ಕೆ ಯೋಗರಾಜ್ ಭಟ್ ಸ್ಪಷ್ಟನೆ
ಬೆಂಗಳೂರು , ಶನಿವಾರ, 30 ಏಪ್ರಿಲ್ 2022 (09:20 IST)
ಬೆಂಗಳೂರು: ಅಜಯ್ ದೇವಗನ್-ಕಿಚ್ಚ ಸುದೀಪ್ ನಡುವೆ ನಡೆದ ಹಿಂದಿ ಭಾಷೆ ಕುರಿತಾದ ಟ್ವೀಟ್ ವಾರ್ ಬಗ್ಗೆ ಪ್ರತಿಕ್ರಿಯಿಸುವಾಗ ತಪ್ಪು ಅರ್ಥ ಬರುವಂತೆ ಹೇಳಿಕೆ ನೀಡಿದ್ದ ನಿರ್ದೇಶಕ ಯೋಗರಾಜ್ ಭಟ್ ಇದೀಗ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಯೋಗರಾಜ್ ಭಟ್ ಈ ಮೊದಲು ಪತ್ರಕರ್ತರು ಕೇಳಿದ ಪ್ರಶ್ನೆಗೆ ನನಗೆ ಹಿಂದಿಯೂ ಗೊತ್ತು, ಕನ್ನಡವೂ ಗೊತ್ತು ಎಂದು ಹಿಂದಿ ರಾಷ್ಟ್ರಭಾಷೆ ಎಂಬ ಅರ್ಥ ಬರುವಂತೆ ವಿವಾದಿತವಾಗಿ ಹೇಳಿಕೆ ನೀಡಿದ್ದರು. ಇದಕ್ಕೆ ನೆಟ್ಟಿಗರಿಂದ ತೀವ್ರ ಟೀಕೆ ಕೇಳಿಬಂದಿತ್ತು.

ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಯೋಗರಾಜ್ ಭಟ್, ‘ರಾಷ್ಟ್ರೀಯ ಭಾಷೆ ಬಗ್ಗೆ ಮಾಧ್ಯಮಮಿತ್ರರು ಪ್ರಶ್ನಿಸಿದಾಗ ಅದರ ಬಗ್ಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ ಎಂದಿದ್ದೇನೆಯೇ ಹೊರತು ಹಿಂದಿಯೇ ರಾಷ್ಟ್ರಭಾಷೆ ಎಂದಿಲ್ಲ. ಯಾರೇ ಆಗಲೀ ಹಿಂದಿಯನ್ನು ರಾಷ್ಟ್ರಭಾಷೆ ಎಂದ ಮಾತ್ರಕ್ಕೆ ಅದು ರಾಷ್ಟ್ರಭಾಷೆಯಾಗುವುದಿಲ್ಲ. ಹೀಗಾಗಿ ವಿವಾದಕ್ಕೆ ಅಚ್ಚ ಕನ್ನಡದಲ್ಲಿ ಅಂತ್ಯ ಹಾಡಬೇಕೆಂದು ಹೇಳಿಕೆ ನೀಡಿದ್ದೆ. ನನ್ನ ಕನ್ನಡಾಭಿಮಾನದ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ನಾನು ನನ್ನ ಸನ್ಮಿತ್ರರಾದ ಕಿಚ್ಚ ಸುದೀಪ್ ಸಾಹೇಬರ ಪರ. ಕನ್ನಡವೇ ನನ್ನ ಪಾಲಿನ ಮಾತೃಭಾಷೆ’ ಎಂದು ಯೋಗರಾಜ್ ಭಟ್ ಲಿಖಿತವಾಗಿ ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಒಟಿಟಿಯಲ್ಲಿ ರಿಲೀಸ್ ಆಗೋದು ಇದೇ ದಿನ?