Webdunia - Bharat's app for daily news and videos

Install App

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

Krishnaveni K
ಸೋಮವಾರ, 14 ಜುಲೈ 2025 (12:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಯೋಗರಾಜ್ ಭಟ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಜೊತೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಅವರ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಅನುರಾಗ್ ಕಶ್ಯಪ್ ಇತ್ತೀಚೆಗಿನ ಕೆಲವು ಸಮಯದಲ್ಲಿ ಮಾಡಿರುವ ವಿವಾದಗಳ ಸರಮಾಲೆ ಎಲ್ಲರಿಗೂ ಗೊತ್ತಿರುವಂತದ್ದೇ. ಅವರ ಕೆಲವೊಂದು ಹೇಳಿಕೆಗಳು ಹಿಂದೂಗಳನ್ನೂ ಕೆರಳಿಸಿತ್ತು. ಕೆಲವು ದಿನಗಳ ಹಿಂದಷ್ಟೇ ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಏನಿವಾಗ ಎಂದಿದ್ದರು. ಹಿಂದೂಗಳನ್ನು ಅವಹಳೇನ ಮಾಡಿದ್ದರು.

ಇದೀಗ ಅದೇ ನಿರ್ದೇಶಕನ ಜೊತೆ ಯೋಗರಾಜ್ ಭಟ್ ಕೈ ಜೋಡಿಸಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅನುರಾಗ್ ಕಶ್ಯಪ್ ಜೊತೆಗಿನ ಫೋಟೋ ಪ್ರಕಟಿಸಿ ಭಟ್ಟರು ತಮ್ಮದೇ ಶೈಲಿಯಲ್ಲಿ ಒಟ್ಟಿಗೆ ಕೆಲಸ ಮಾಡಲಿರುವುದಾಗಿ ಘೋಷಿಸಿದ್ದಾರೆ.

ಆದರೆ ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಹಿಂದೂ ದೇವರ ಮೇಲೆ, ಬ್ರಾಹ್ಮಣರ ಮೇಲೆ ಕಕ್ಕ, ಮೂತ್ರ ಮಾಡ್ತೀನಿ ಎಂದವನ ಜೊತೆ ಸಿನಿಮಾ ಮಾಡಬೇಕಾ? ಒಬ್ಬ ಯೋಗ್ಯನ ಜೊತೆ ಇನ್ನೊಬ್ಬ ಅಯೋಗ್ಯ ಸರಿಯಾಗಿದೆ ಜೋಡಿ ಎಂದು ಕಿಡಿ ಕಾರಿದ್ದಾರೆ. ಇನ್ನು ಕೆಲವರು ಭಟ್ರೇ ನಿಮಗೆ ಬೇರೆ ಯಾರೂ ಸಿಗಲಿಲ್ವಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments