Select Your Language

Notifications

webdunia
webdunia
webdunia
webdunia

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ನಟ ಯುವರಾಜಕುಮಾರ್

Sampriya

ತುಮಕೂರು , ಗುರುವಾರ, 19 ಜೂನ್ 2025 (17:41 IST)
Photo Credit X
ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದ ವೇಳೆ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯುವ ರಾಜ್‌ಕುಮಾರ್ ಅವರು ಬಹಿರಂಗವಾಹಿ ಕ್ಷಮೆ ಕೋರಿದ್ದಾರೆ. 

ಎಕ್ಕ ಸಿನಿಮಾದ ಸುದ್ದಿಗೋಷ್ಠಿಯಲ್ಲಿ  ಘಟನೆಗೆ ಪಶ್ಚಾತ್ತಾಪ ಪಟ್ಟು ಮಹಿಳೆಗೆ ಕ್ಷಮೆ ಕೇಳಿದ್ದಾರೆ. ಮಹಿಳೆ ಮೇಲೆ ಕಾರು ಹತ್ತಿಸಿ ತಪ್ಪಿಸಿಕೊಂಡು ಹೋಗಿದ್ದಾರೆ ಎಂಬ ಆರೋಪ ಯುವರಾಜ್‌ಕುಮಾರ್ ಮೇಲೆ ಕೇಳಿಬಂದಿತ್ತು. ಇದೀಗ ಘಟನೆಯ ಸಂಪೂರ್ಣ ಚಿತ್ರಣ ಬಿಚ್ಚಿಟ್ಟಿದ್ದಾರೆ. ಘಟನೆಗೆ ನೊಂದು ಕ್ಷಮೆಯನ್ನೂ ಯಾಚಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ನಟ ಯುವ ರಾಜ್‌ಕುಮಾರ್ ಆಗಮನದ ಹಿನ್ನೆಲೆ ಆ ಸ್ಥಳದಲ್ಲಿ ಭಾರೀ ಜನಸೇರಿತ್ತು.  ಆಗ ನಡೆದ ತಳ್ಳಾಟ ನೂಕಾಟದಲ್ಲಿ ಯುವ ರಾಜ್‌ಕುಮಾರ್ ಕುಳಿತಿದ್ದ ಕಾರು ಮಹಿಳೆಯ ಕಾಲ ಮೇಲೆ ಹರಿದಿತ್ತು. ಘಟನೆಯಿಂದ ಮಹಿಳೆಯ ಕಾಲಿಗೆ ಪೆಟ್ಟಾಗಿತ್ತು. ಘಟನೆ ನಡೆದು ಮೂರು ದಿನಗಳ ಬಳಿಕ ಆ ವಿಚಾರವಾಗಿ ಇದೀಗ ಯುವರಾಜ್‌ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. 


ನನಗೆ ಮಹಿಳೆಯ ಕಾಲ ಮೇಲೆ ಕಾರು ಹತ್ತಿದ್ದ ವಿಚಾರ ತಿಳಿದಿರಲಿಲ್ಲ. ಬೆಂಗಳೂರಿಗೆ ವಾಪಾಸ್ ಬಂದ್ಮೇಲೆ ಈ ವಿಚಾರ ಗೊತ್ತಾಯಿಯಿತು. ಘಟನೆ ಬಗ್ಗೆ ತಿಳಿದ್ಮೇಲೆ ನಮ್ಮ ಅಭಿಮಾನಿಗಳ ಕಡೆಯಿಂದ ಗಾಯಗೊಂಡ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಯುವರಾಜ್‌ಕುಮಾರ್.

Share this Story:

Follow Webdunia kannada

ಮುಂದಿನ ಸುದ್ದಿ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌