Select Your Language

Notifications

webdunia
webdunia
webdunia
webdunia

ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಅಶ್ವಿನಿ ಪುನೀತ್ ಗೆ ಬಲವಾಗಿ ನಿಂತ ಯುವ, ವಿನಯ್

ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಅಶ್ವಿನಿ ಪುನೀತ್ ಗೆ ಬಲವಾಗಿ ನಿಂತ ಯುವ, ವಿನಯ್
ಬೆಂಗಳೂರು , ಶುಕ್ರವಾರ, 21 ಅಕ್ಟೋಬರ್ 2022 (08:20 IST)
ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರಿ ರಿಲೀಸ್ ಈವೆಂಟ್ ನ್ನು ದೊಡ್ಮನೆ ಅದ್ಧೂರಿಯಾಗಿ ಆಯೋಜಿಸುತ್ತಿದೆ.

ಈ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ವಹಿಸಿಕೊಂಡಿದ್ದಾರೆ. ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಬೃಹತ್ ವೇದಿಕೆ ಸಿದ್ಧಪಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗುತ್ತಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಶ್ವಿನಿ ಪುನೀತ್ ಕಳೆದ ಒಂದು ತಿಂಗಳಿನಿಂದ ಓಡಾಡುತ್ತಿದ್ದಾರೆ. ಅವರಿಗೆ ಸಾಥ್ ನೀಡಿರುವುದು ರಾಘವೇಂದ್ರ ರಾಜ್ ಕುಮಾರ್ ಮಕ್ಕಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್. ಇಡೀ ಕಾರ್ಯಕ್ರಮದ ಉಸ್ತುವಾರಿ ಜೊತೆಗೆ ಅಪ್ಪು ಫುಡ್ ಫೆಸ್ಟಿವಲ್ ನ ಹೊಣೆಯನ್ನೂ ಈ ಇಬ್ಬರು ದೊಡ್ಮನೆ ಕುಡಿಗಳು ನೋಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ಈ ಕೆಲಸಕ್ಕೆ ಅಪ್ಪು ಅಭಿಮಾನಿಗಳು ಫಿದಾ ಆಗಿದ್ದಾರೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಕರುನಾಡ ಪ್ರೀತಿಯ ಅಪ್ಪುಗೆ ಇಂದು ದಿಗ್ಗಜರಿಂದ ನಮನ