ಮೈಸೂರಿನಲ್ಲಿ ಶ್ರೀರಾಮನ ಹಾಡು ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ

Sampriya
ಗುರುವಾರ, 9 ಮೇ 2024 (16:45 IST)
Photo Courtesy X
ಮೈಸೂರು: ಇಲ್ಲಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು ಜೈ ಶ್ರೀರಾಮ್ ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಗಾಯಕ ಶ್ರೀಹರ್ಷ ಅವರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದು, ಈಓ ವೇಳೆ ಅವರು  ಜಯತು ಜಯತು ಜೈ ಶ್ರೀರಾಮ್ ಎಂದು ಹಾಡಿದರು. ಇದಕ್ಕೆ ಅಡ್ಡಿಪಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ.

ಈ ವೇಳೆ ಹಿಂದೂ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಗಲಾಟೆ ಶುರುವಾಗುತ್ತಿದಂತೆ ಪೊಲೀಸರು ಸ್ಟೇಡಿಯಂಗೆ ಬಂದು ವಿದ್ಯಾರ್ಥಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ. ಇವರ ಹಾವಳಿ ಜಾಸ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರತಾಪ್ ಎಲ್ಸ್‌ನಲ್ಲಿ ಫೋಟೋ ಹಂಚಿ ಬರೆದುಕೊಂಡಿದ್ದಾರೆ. ನಿನ್ನೆ ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು "ಜಯತು ಜಯತು ಜೈ ಶ್ರೀರಾಮ್" ಎಂದು ಹಾಡಿದಾಗ ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ಇದನ್ನೆಲ್ಲಾ ನೋಡಿಯೂ  ಕೈಕಟ್ಟಿ ಕುಳಿತುಕೊಳ್ಳಬೇಕಾ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments