Webdunia - Bharat's app for daily news and videos

Install App

ಗುಲ್ವಾಡಿ, ಬೆಳಗೆರೆ ಸಹಿತ 29 ಮಂದಿಗೆ ಮಾಧ್ಯಮ ಪ್ರಶಸ್ತಿ

Webdunia
ಶನಿವಾರ, 2 ಫೆಬ್ರವರಿ 2008 (11:09 IST)
ಹಿರಿಯ ಪತ್ರಕರ್ತರಾದ ಸಂತೋಷ್ ಕುಮಾರ್ ಗುಲ್ವಾಡಿ, ನಾಗೇಶ್ ಹೆಗಡೆ, ಮನೋಹರ ಪ್ರಸಾದ್ ಹಾಗೂ ರವಿ ಬೆಳಗೆರೆ ಸೇರಿದಂತೆ 29 ಮಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಿತಾವಧಿ ಪ್ರಶಸ್ತಿಯನ್ನು ಪ್ರಕಟಿಸಿದೆ.

ಈನಾಡು ನ್ಯೂಸ್ ಟೈಮ್ ಪತ್ರಿಕೆಯ ನವದೆಹಲಿ ಪ್ರತಿನಿಧಿ ಗಿರೀಶ್ ನಿಕ್ಕಂ ಅವರಿಗೆ ವಿಶೇಷ ಪ್ರಶಸ್ತಿ ರೂಪವಾಗಿ 15 ಸಾವಿರ ರೂ. ನಗದು ಬಹುಮಾನವನ್ನು ಘೋಷಿಸಲಾಗಿದ್ದರೆ, ಜೀವಿತಾವಧಿ ಪ್ರಶಸ್ತಿ ವಿಜೇತರಿಗೆ 10 ಸಾವಿರ ರೂ. ನಗದು ಬಹುಮಾನ ಪ್ರಕಟಿಸಲಾಗಿದೆ.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ವಿ.ಎನ್.ಸುಬ್ಬರಾವ್ ಈ ಪ್ರಕಟಣೆ ನೀಡಿದ್ದು, ಮಾರ್ಚ್ 1 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದುವರೆಗೂ ಅನುಸರಿಸಲಾಗುತ್ತಿದ್ದ ಕ್ರಮದಂತೆ ಪ್ರತಿವರ್ಷ 14 ಮಂದಿಗೆ ಮಾತ್ರ ಜೀವಿತಾವಧಿ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈ ವರ್ಷ ಅಕಾಡೆಮಿಗೆ ಬೆಳ್ಳಿವರ್ಷದ ಸಂಭ್ರಮ. ಆದ್ದರಿಂದ ಜಿಲ್ಲೆಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments