Select Your Language

Notifications

webdunia
webdunia
webdunia
webdunia

ನಂದನ್ ನೀಲೇಕಣಿ ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ?

ನಂದನ್ ನೀಲೇಕಣಿ ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ?
, ಮಂಗಳವಾರ, 24 ಡಿಸೆಂಬರ್ 2013 (17:29 IST)
PR
PR
ಬೆಂಗಳೂರು: ಯುಎಡಿಎಐ ಅಧ್ಯಕ್ಷರಾಗಿರುವ ನಂದನ್ ನೀಲೇಕಣಿ ಅವರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರಿಗೆ ರಾಜಕೀಯಕ್ಕೆ ಬರುವ ಆಸಕ್ತಿಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದಾಗ ರಾಜಕೀಯಕ್ಕೆ ಬರುವ ಆಸೆಯನ್ನು ವ್ಯಕ್ತಪಡಿಸಿದರು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಿ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.

ನಂದನ್ ನೀಲೇಕಣಿ ಅವರು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡರೆ ಕಾರ್ಪೊರೇಟ್ ವಲಯದ ಅನೇಕ ಜನರು ಕಾಂಗ್ರೆಸ್ ಕಡೆ ಒಲವು ತೋರಿಸುತ್ತಾರೆ ಎಂದು ಪರಮೇಶ್ವರ್ ಹೇಳಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅವರು ಅಭ್ಯರ್ಥಿಯಾಗಿ ನಿಂತರೆ ಅವರಿಗೆ ಹೆಚ್ಚಿನ ಬೆಂಬಲ ಸಿಗಬಹುದು ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Share this Story:

Follow Webdunia kannada