Webdunia - Bharat's app for daily news and videos

Install App

ನನ್ನನ್ನು ಪ್ರಶ್ನಿಸಲು ಅನಂತಮೂರ್ತಿ ಯಾರು: ರಾಜ್ಯಪಾಲರ ಕಿಡಿ

Webdunia
ಗುರುವಾರ, 30 ಜನವರಿ 2014 (19:14 IST)
PR
PR
ವಿಶ್ವವಿದ್ಯಾನಿಲಯದ ಕುಲಪತಿ ನೇಮಕ ನನ್ನ ಪರಮಾಧಿಕಾರ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಹೇಳುವ ಮೂಲಕ ಅನಂತಮೂರ್ತಿ ತಮಗೆ ಹೇಳಬೇಕಾದ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ. ಗುರುವಾರ ಚಿಂತನಾ ಸಭೆಯಲ್ಲಿ ಮಾತನಾಡುತ್ತಿದ್ದ ರಾಜ್ಯಪಾಲರು, ದಾವಣಗೆರೆ ವಿವಿಗೆ ಕುಲಪತಿ ನೇಮಕ ವಿಚಾರದಲ್ಲಿ ನನ್ನ ಅಧಿಕಾರವನ್ನು ಪ್ರಶ್ನಿಸುವ ಹಕ್ಕು ಅನಂತಮೂರ್ತಿಗಿಲ್ಲ. ಕುಲಪತಿ ನೇಮಕ ನನ್ನ ವಿವೇಚನೆಗೆ ಬಿಟ್ಟಿದ್ದು ಎಂದು ಭಾರದ್ವಾಜ್ ಹೇಳಿದರು.ಕುಲಪತಿ ನೇಮಕಾತಿ ವಿಚಾರದಲ್ಲಿ ಬೇರೆಯವರು ಮೂಗು ತೂರಿಸುವ ಅಗತ್ಯವಿಲ್ಲ. ಶೋಧನಾ ಸಮಿತಿಯನ್ನು ನೇಮಿಸಿದ್ದೇ ನಾನು. ನನ್ನನ್ನು ಪ್ರಶ್ನಿಸಲು ಅನಂತಮೂರ್ತಿ ಯಾರು ಎಂದು ರಾಜ್ಯಪಾಲರು ಖಾರವಾಗಿ ಕೇಳಿದ್ದಾರೆ. ಕುಲಪತಿ ನೇಮಕ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂದು ಅನಂತಮೂರ್ತಿ ಆರೋಪಿಸಿದ್ದರು.

ಕುಲಪತಿಗಳ ನೇಮಕ ದಂಧೆಯಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸದೇ ರಾಜ್ಯಪಾಲರು ಪದೇ ಪದೇ ಮಿತಿ ದಾಟುತ್ತಿದ್ದಾರೆ ಎಂದು ಶೋಧನಾ ಸಮಿತಿ ಅಧ್ಯಕ್ಷ ಅನಂತಮೂರ್ತಿ ನೇರವಾಗಿ ಕಿಡಿಕಾರಿದ್ದರು.ಕುಲಪತಿ ಬಿ.ಬಿ. ಕಲಿವಾಳರನ್ನು ಬದಲಿಸಬೇಕು ಎಂದು ಒತ್ತಾಯಿಸಿದ್ದರು. .ನೇಮಕ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯೇ ಇಲ್ಲ. ಬುಡಕಟ್ಟು ಸಮುದಾಯ ಪ್ರತಿನಿಧಿಸೋ ಗೋಮತಿದೇವಿಯವರನ್ನು ಕುಲಪತಿ ಹುದ್ದೆಗೆ ನೇಮಿಸದೇ ಅನ್ಯಾಯ ಮಾಡಲಾಗಿದೆ ಎಂದು ಅನಂತಮೂರ್ತಿ ದೂರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments