Select Your Language

Notifications

webdunia
webdunia
webdunia
webdunia

ಬಳ್ಳಾರಿಯಲ್ಲಿ ನಾಲ್ವರು ಕಾರ್ಮಿಕರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಬಳ್ಳಾರಿಯಲ್ಲಿ ನಾಲ್ವರು ಕಾರ್ಮಿಕರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
, ಬುಧವಾರ, 26 ಮಾರ್ಚ್ 2014 (10:43 IST)
PR
PR
ಬಳ್ಳಾರಿಯಲ್ಲಿ ಗುತ್ತಿಗೆ ಪೌರಕಾರ್ಮಿಕರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಮಹಾನಗರಪಾಲಿಕೆ ಅಧಿಕಾರಿಗಳು ಏಕಾಏಕಿ ಮೂರು ಜನ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿತ್ತು. ಇದನ್ನು ಪ್ರತಿಭಟಿಸಿ ಮಹಿಳಾ ಕಾರ್ಮಿಕರು ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಕಾರ್ಮಿಕರು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನಾಲ್ವರು ಪೌರಕಾರ್ಮಿಕರು ಮೈಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ವೇತನ ಹೆಚ್ಚಳ ಮತ್ತಿತರ ಸೌಲಭ್ಯಗಳನ್ನು ನೀಡಬೇಕೆಂದು ಪೌರಕಾರ್ಮಿಕರು ಕಳೆದ ಕೆಲವು ದಿನಗಳಿಂದ ಒತ್ತಾಯಿಸಿದ್ದಾರೆ.

Share this Story:

Follow Webdunia kannada