Select Your Language

Notifications

webdunia
webdunia
webdunia
webdunia

ಬಿಜೆಪಿ ಮಹಿಳೆಯರಿಗೆ ಯಾವ ಕಾರ್ಯಕ್ರಮ ಹಮ್ಮಿಕೊಳ್ಳಲಿಲ್ಲ: ಸಿಎಂ ಟೀಕೆ

ಬಿಜೆಪಿ ಮಹಿಳೆಯರಿಗೆ ಯಾವ ಕಾರ್ಯಕ್ರಮ ಹಮ್ಮಿಕೊಳ್ಳಲಿಲ್ಲ: ಸಿಎಂ ಟೀಕೆ
ತುಮಕೂರು , ಭಾನುವಾರ, 16 ಫೆಬ್ರವರಿ 2014 (16:23 IST)
PR
PR
ಕಾಂಗ್ರೆಸ್‌ ಪಕ್ಷಕ್ಕೆ ಮುಂಬರುವ ಲೋಕಸಭೆ ಚುನಾವಣೆ ಒಂದು ಸವಾಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತುಮಕೂರಿನ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೇಶಕ್ಕೆ ಉಳಿಗಾಲವಿಲ್ಲ. ಕೋಮುವಾದಿ ಬಿಜೆಪಿ ಏನಾದರೂ ಮಾಡಿ ಅಧಿಕಾರ ಪಡೆಯಲು ಸತತ ಪ್ರಯತ್ನ ಮಾಡುತ್ತಿದೆ. ಅವರು ಅಧಿಕಾರಕ್ಕೆ ಬಂದ್ರೆ ಬಡವರಿಗೆ, ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ. ವಾಜಪೇಯಿ 6 ವರ್ಷಗಳ ಕಾಲ ಪ್ರಧಾನಿಯಾಗಿದ್ದರು.

ಅವರು ಬಡವರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿಲ್ಲ. ಇವತ್ತೇನಾದ್ರೂ ಕಾರ್ಯಕ್ರಮ ಕೊಟ್ಟಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದರು. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಭವ್ಯ ಭವಿಷ್ಯಕ್ಕೆ ಮುನ್ನುಡಿ ಬರೆಯಿರಿ ಎಂದು ಸಿದ್ದರಾಮಯ್ಯ ಹೇಳಿದರು.

Share this Story:

Follow Webdunia kannada