ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರದ ಸಮೀಪದ ಎಸ್.ಆರ್.ವ್ಯಾಲಿ ರೆಸಾರ್ಟ್ನಲ್ಲಿ ನಡೆದ ನಗ್ನ ನೃತ್ಯವನ್ನು ಖಂಡಿಸಿರುವ ಶಾಸಕ ವೆಂಕಟರಮಣಯ್ಯ, ಈ ಕುರಿತು ದೂರು ನೀಡಿದ್ದರೂ ಪೊಲೀಸರು ಯಾವುದೇ ತನಿಖೆ ಕೈಗೊಳ್ಳದಿರುವುದರಿಂದ ಇಂತಹ ಪ್ರಕರಣ ನಡೆಯಲು ಕಾರಣವಾಗಿದೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಒತ್ತಾಯಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳುವ ದಿಸೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ. ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರೆಸಾರ್ಟ್ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಪೊಲೀಸರ ನಿಗಾ ಚುರುಕುಗೊಳಿಸುವ ಕುರಿತು ಸಂಬಂಧಪಟ್ಟವರೊಡನೆ ಚರ್ಚಿಸಲಾಗುವುದು ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದರು.