Select Your Language

Notifications

webdunia
webdunia
webdunia
webdunia

ಶ್ರೀರಾಮುಲು "ಕೈ" ಹಿಡಿಯುವುದಕ್ಕೆ ಕಾಂಗ್ರೆಸ್‌ಗೂ ಇಷ್ಟವಿಲ್ಲ

ಶ್ರೀರಾಮುಲು
ಬೆಂಗಳೂರು , ಮಂಗಳವಾರ, 4 ಫೆಬ್ರವರಿ 2014 (14:09 IST)
PR
PR
ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶ್ರೀರಾಮುಲು ಕಾಂಗ್ರೆಸ್ ಸೇರ್ತಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದೆ. ಹರಪನಹಳ್ಳಿ ಕಾಂಗ್ರೆಸ್ ಶಾಸಕ ರವೀಂದ್ರ ಈ ಕುರಿತು ಹೇಳಿಕೆ ನೀಡಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿದೆ ಎಂದು ಹೇಳಿದರು. ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಗಣಿದಣಿಗಳಾಗಿದ್ದ ರೆಡ್ಡಿಗಳ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಿದ್ದು, ಇಂತಹ ಸನ್ನಿವೇಶದಲ್ಲಿ ರೆಡ್ಡಿ ಸಹೋದರರ ಜತೆಗಿದ್ದ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ನಡುವೆ ತಾಲೂಕು ಬ್ಲಾಕ್ ಮಟ್ಟದಲ್ಲಿ ಚರ್ಚೆ ಬಳಿಕವೇ ಶ್ರೀರಾಮುಲು ಸೇರ್ಪಡೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ.

Share this Story:

Follow Webdunia kannada