Select Your Language

Notifications

webdunia
webdunia
webdunia
webdunia

ಅಕ್ರಮಅಕ್ರಮ ಡಿನೋಟಿಫಿಕೇಷನ್ ಆರೋಪ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಜಾ

ಅಕ್ರಮಅಕ್ರಮ ಡಿನೋಟಿಫಿಕೇಷನ್ ಆರೋಪ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಜಾ
, ಶುಕ್ರವಾರ, 29 ನವೆಂಬರ್ 2013 (20:20 IST)
PR
PR
ಬೆಂಗಳೂರು: ಯಡಿಯೂರಪ್ಪ ಅವರ ಅಕ್ರಮ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಸಿರಾಜುದ್ದೀನ್ ಭಾಷಾ ಖಾಸಗಿ ದೂರನ್ನು ಸಲ್ಲಿಸಿದ್ದು, ಈ ಪ್ರಕರಣವನ್ನು ವಜಾಗೊಳಿಸಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ. ನಾಗರಭಾವಿ 5 ಎಕರೆ 13 ಗುಂಟೆ ಜಾಗವನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆಂದು ಅವರ ವಿರುದ್ಧ ಸಿರಾಜುದ್ದೀನ್ ಭಾಷಾ ದೂರು ಸಲ್ಲಿಸಿದ್ದರು. ರಾಜ್ಯಪಾಲರ ಅನುಮತಿ ಪಡೆದು ಈ ದೂರು ನೀಡಿದ್ದರು.

ಯಡಿಯೂರಪ್ಪ ತಮ್ಮ ವಿರುದ್ಧ ಪ್ರಕರಣವನ್ನು ವಜಾಗೊಳಿಸುವಂತೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಯಡಿಯೂರಪ್ಪ ಅವರ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಯಡಿಯೂರಪ್ಪ ಈಗ ಕೋರ್ಟ್ ಆದೇಶಕ್ಕೆ ಕಾಯುವಂತಹ ಪರಿಸ್ಥಿತಿ ಬಂದಿದೆ.

Share this Story:

Follow Webdunia kannada