Webdunia - Bharat's app for daily news and videos

Install App

ಅನೈತಿಕ ಸಂಬಂಧ: ಪತ್ನಿಯ ಪ್ರೇಮಿಯ ಕೊಲೆ ಆರೋಪಿ ಬಂಧನ

Webdunia
ಮಂಗಳವಾರ, 21 ಫೆಬ್ರವರಿ 2012 (10:10 IST)
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಿವನಾಯ್ಕ ತನ್ನ ಪತ್ನಿಯಾದ ಮಾಲಾಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ರಮೇಶ್ ಎಂಬ ಆಟೋ ಚಾಲಕನನ್ನು ಭಾನುವಾರ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ತಪ್ಪೆಂದು ಹಲವು ಬಾರಿ ರಮೇಶನಿಗೆ ಹೇಳಿದ್ದರೂ ಕೇಳದೇ, ಅನೈತಿಕ ಸಂಬಂಧವನ್ನು ಮುಂದುವರಿಸಿದ ರಮೇಶನನ್ನು ಘಂಟ್ಯಾಪುರ-ತರಗನಹಳ್ಳಿ ಮಾರ್ಗ ಮದ್ಯೆದಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಆರೋಪಿ ಶಿವ ನಾಯ್ಕ ಒಪ್ಪಿಕೊಂಡಿದ್ದಾನೆ.

ಕೊಲೆ ಮಾಡಿದ ನಂತರ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಶಿವ ನಾಯ್ಕನನ್ನು ಹರಿಹರ ತಾಲೂಕಿನ ಕೊಮಾರನಹಳ್ಳಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಬಳಿ ಪೊಲೀಸ್ ವಾಹನವನ್ನು ಕಂಡು ಓಡಲು ಯತ್ನಿಸಿದ ಶಿವನಾಯ್ಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕೊಲೆ ಸಂಭವಿಸಿ ಕೇವಲ 11 ಗಂಟೆಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿದ ಪೊಲೀಸ್ ಸಿಬ್ಬಂದಿಯ ಕಾರ್ಯಚರಣೆಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments