Webdunia - Bharat's app for daily news and videos

Install App

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಆಟೋ ಚಾಲಕರ ಬೃಹತ್ ರ‌್ಯಾಲಿ

Webdunia
ಶನಿವಾರ, 25 ಜನವರಿ 2014 (13:18 IST)
PR
PR
ಬೆಂಗಳೂರು: ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಆಟೋ ಚಾಲಕರ ಬೃಹತ್ ರ‌್ಯಾಲಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ರ‌್ಯಾಲಿಯಿಂದಾಗಿ ರೈಲ್ವೆ ನಿಲ್ದಾಣದ ಸುತ್ತಮುತ್ತ ಟ್ರಾಫಿಕ್ ಜ್ಯಾಂ ಆಗಿದೆ. ವಿವಿಧ ಆಟೋಚಾಲಕರ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಕೊಂಡಿವೆ. ಆಟೋ ಚಾಲಕರ ಮುಷ್ಕರದಲ್ಲಿ ಒಬ್ಬ ಆಟೋ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಡ ನಡೆದಿದೆ. ಲಕ್ಷ್ಮೀನಾರಾಯಣ ಎಂಬ ಆಟೋಚಾಲಕ ವಿಷಸೇವನೆ ಮಾಡಿ ಅಸ್ವಸ್ಥನಾಗಿದ್ದರಿಂದ ಅವನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಲಕ್ಷ್ಮೀನಾರಾಯಣ ಆನಂದ್ ರಾವ್ ವೃತ್ತದಲ್ಲಿ ವಿಷಸೇವನೆ ಮಾಡಿದ್ದರಿಂದ ಕೂಡಲೇ ಅವನನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಆಟೋ ಮುಷ್ಕರದಿಂದಾಗಿ 24 ಗಂಟೆಗಳು ಆಟೋಸಂಚಾರ ಬಂದ್ ಆಗಿದೆ.

ಎಲ್‌ಪಿಜಿ ದರ ಏರಿಕೆಯಿಂದ ಆಟೋ ಚಾಲಕರ ಆದಾಯಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ದರವನ್ನು ಕೂಡಲೇ ಇಳಿಸಬೇಕೆಂದು ಆಗ್ರಹಿಸಿದ್ದಾರೆ. ಬೆಂಗಳೂರಿನ ಸಮೀಪದ ಊರುಗಳಿಂದ ಆಟೋ ಚಾಲಕರು ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments