Select Your Language

Notifications

webdunia
webdunia
webdunia
webdunia

ಇಂದು ರಾಜ್ಯಕ್ಕೆ ಅಮಿತ್​ ಶಾ ಎಂಟ್ರಿ

ಇಂದು ರಾಜ್ಯಕ್ಕೆ ಅಮಿತ್​ ಶಾ ಎಂಟ್ರಿ
bangalore , ಶುಕ್ರವಾರ, 21 ಏಪ್ರಿಲ್ 2023 (16:34 IST)
ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕರ್ನಾಟಕ ಗೆಲ್ಲಲು ಬಿಜೆಪಿ ವರಿಷ್ಠರು ರಣತಂತ್ರ ರೂಪಿಸಿದ್ದು, ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದಾರೆ. ಇಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್​ ಶಾ ರಾಜ್ಯಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಅಮಿತ್‌ ಶಾ ಮಧ್ಯಾಹ್ನ 3.45 ರಿಂದ ಸಂಜೆ 5.15ರವೆರಗೂ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ಗೆ ಭೇಟಿ ನೀಡಲಿರುವ ಅಮಿತ್‌ ಶಾ, ರಾತ್ರಿ 7.35ರಿಂದ ಬಿಜೆಪಿ ನಾಯಕರ ಜೊತೆ ಮೀಟಿಂಗ್‌ ನಡೆಸಲಿದ್ದಾರೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಇಂದು ಮತ್ತು ನಾಳೆ ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದು, ಚುನಾವಣ ರಣತಂತ್ರ ಹೆಣೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಪ್ರಶಂಸೆ ಬಿಜೆಪಿ ಸಂಸ್ಕಾರ