Webdunia - Bharat's app for daily news and videos

Install App

ಎಚ್ಚರ ಗ್ರಾಹಕ ಎಚ್ಚರ : ಬ್ಯಾಂಕ್‌ ಸಿಬ್ಬಂದಿಯಿಂದಲೇ ಖೋಟಾನೋಟು ಚಲಾವಣೆ.!

Webdunia
ಗುರುವಾರ, 31 ಅಕ್ಟೋಬರ್ 2013 (18:17 IST)
PR
PR
ಎಸ್‌ಬಿಐ ಬ್ಯಾಂಕಿನ ನೌಕರರೇ ಖೋಟಾನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆಘಾತಕಾರಿ ಸುದ್ದಿಯೊಂದು ಇದೀಗ ಹೊರ ಬಿದ್ದಿದೆ. ಇಬ್ಬರು ಎಸ್‌ಬಿಐ ನೌಕರರು ಪೆಟ್ರೋಲ್‌ ಬಂಕ್‌ ಬಳಿಗೆ ಹೋಗಿ ಅಲ್ಲಿ ಸಾವಿರ ರೂಪಾಯಿ ಮುಖಬೆಲೆಯ ನೋಟೊಂದನ್ನು ಚಲಾವಣೆ ಮಾಡಲು ಯತ್ನಿಸಿದ್ದಾರೆ. ಆದ್ರೆ ಬಂಕ್‌ ಸಿಬ್ಬಂದಿಗಳು ನೋಟನ್ನು ಪರಿಶೀಲನೆ ಮಾಡಿದಾಗ ಅದು ಖೋಟಾನೋಟು ಎಂದು ತಿಳಿದುಬಂದಿದೆ. ಅವರನ್ನು ಹಿಡಿದು ವಿಚಾರಣೆ ನಡೆಸಿದಾಗ ಅವರು ಬ್ಯಾಂಕ್‌ ನೌಕರರು ಎಂದು ತಿಳಿದುಬಂದಿದೆ.

ರಾಮನಗರ ಜಿಲ್ಲೆಯ ಮಾಗೇನಹಳ್ಳಿಯ ಎಸ್‌ಬಿಐ ಶಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ ಅಯಾಜ್‌ ಮತ್ತು ಎಸ್‌ಬಿಐ ಬ್ಯಾಂಕಿನ ಕಾರು ಚಾಲಕನಾಗಿರುವ ವೆಂಕಟೇಶ್‌ ಎಂಬ ಇಬ್ಬರು ಇಬ್ಬರು ವ್ಯಕ್ತಿಗಳು ರಾಮನಗರದ ಮಾಗೇನಹಳ್ಳಿಯ ಬಳಿ ಇರುವಂತಹ ಪೆಟ್ರೋಲ್ ಬಂಕ್‌ನಲ್ಲಿ ಸಾವಿರ ರೂಪಾಯಿಯ ಮುಖಬೆಲೆಯ ಖೋಟಾನೋಟನ್ನು ಚಲಾವಣೆ ಮಾಡಲು ಯತ್ನಿಸಿದಾಗ ಈ ವಿಷಯ ಹೊರ ಬಂದಿದೆ.

ಸದ್ಯಕ್ಕೀಗ ಅಯಾಜ್‌ ಮತ್ತು ವೆಂಕಟೇಶ್‌ ಎಂಬ ಇಬ್ಬರು ವ್ಯಕ್ತಿಗಳನ್ನು ಇದೀಗ ಪೋಲೀಸ್‌ ವಶಕ್ಕೆ ಒಪ್ಪಿಸಲಾಗಿದೆ. ಬಂಧಿತರಿಂದ ಖೋಟಾನೋಟುಗಳನ್ನು ವಶಪಡಿಸಿಕೊಂಡಿರುವ ಪೋಲೀಸ್‌ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments